On 23 Mar 2017 8:02 pm, "Sameera samee" <mehak.sa...@gmail.com> wrote:
> ಕನ್ನಡ ಸಾಹಿತ್ಯ ಲೋಕದ ಪ್ರಥಮ ರಾಷ್ಟ್ರಕವಿ ಎಂ.ಗೋವಿಂದ ಪೈ ಅವರ ಜನುಮ ದಿನ ಇಂದು. > ಅವರ ಬಗ್ಗೆ ಒಂದಿಷ್ಟು ಮಾಹಿತಿ..... > ರಾಷ್ಟ್ರಕವಿ ಎಂ. ಗೋವಿಂದ ಪೈ > > ಕನ್ನಡದ ಪ್ರಥಮ ರಾಷ್ಟ್ರಕವಿ ಎಂ. ಗೋವಿಂದ ಪೈ ಅವರು ಜನ್ಮತಾಳಿದ ದಿನ ಮಾರ್ಚ್ 23, 1883. > ಅವರು ಜನಿಸಿದ್ದು ಮಂಜೇಶ್ವರದಲ್ಲಿ. ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ವ್ಯಾಸಂಗ > ನಡೆಸಿದರು. ಬಿ. ಎ ಪರೀಕ್ಷೆ ಕಟ್ಟಿದ್ದಾಗ ಅವರ ತಂದೆ (ಮಂಗಳೂರಿನ ಸಾಹುಕಾರ ತಿಮ್ಮ ಪೈ) > ಅವರ ಮರಣದ ದೆಸೆಯಿಂದಾಗಿ ಪರೀಕ್ಷೆಯ ಮಧ್ಯದಲ್ಲಿಯೇ ಮಂಗಳೂರಿಗೆ ಹಿಂತಿರುಗಬೇಕಾಯಿತು. > ಹಿರಿಯ ಮಗನಾಗಿ ಮನೆಯ ಹೊಣೆಯನ್ನು ಹೊರಬೇಕಾಯಿತು. ಆದ್ದರಿಂದ ಅವರು ಬಿ.ಎ ಪದವಿಯನ್ನು > ಪಡೆಯಲಾಗಲಿಲ್ಲ. ಆದರೂ ಅವರು ಇಂಗ್ಲಿಷ್ ವಿಭಾಗದಲ್ಲಿ ಉನ್ನತ ಶ್ರೇಣಿ ಗಳಿಕೆಗಾಗಿ ಚಿನ್ನದ > ಪದಕ ಗಳಿಸಿದರು. ಅವರ ವ್ಯಾಸಂಗ ಅರ್ಧಕ್ಕೇ ನಿಂತರೂ ಅವರ ಅಧ್ಯಯನ ಮಾತ್ರ ನಿರಾತಂಕವಾಗಿ > ಸಾಗಿತು. ಅವರು ತಮ್ಮ ತಾಯಿಯ ಊರಾದ ಮಂಜೇಶ್ವರದಲ್ಲಿ ಹುಟ್ಟಿದ್ದು ಮಾತ್ರವಲ್ಲದೆ, ಆಕೆಯ > ಮೂಲಕ ತಮಗೆ ದತ್ತವಾದ ಆಸ್ತಿಯನ್ನೂ ನೋಡಿಕೊಂಡು ಅಲ್ಲಿಯೇ ನೆಲೆಸಿದ್ದರಿಂದ ಅವರನ್ನು > ಮಂಜೇಶ್ವರದ ಗೋವಿಂದ ಪೈ ಎಂದು ಕರೆಯುವುದೇ ರೂಢಿಯಾಯಿತು. > > ಗೋವಿಂದ ಪೈ ಅವರ ಪತ್ನಿ ಕೃಷ್ಣಾಬಾಯಿ ಅವರು ತಮ್ಮ 45ನೆಯ ವಯಸ್ಸಿನಲ್ಲಿ ಕಣ್ಮುಚ್ಚಿದರು. > ಆಕೆಯ ನೆನಪಿನಲ್ಲಿ ‘ಗೊಮ್ಮಟ ಜಿನಸ್ತುತಿ’ ಎಂಬ ಒಂದು ಕವಿತೆಯನ್ನು ರಚಿಸಿ ಆಕೆಗೆ > ಕಾಣಿಕೆಯಾಗಿತ್ತರು. ಜೊತೆಗೆ ಸಹಧರ್ಮಿಣಿಯ ನೆನಪಿಗೆ ಬಾಷ್ಪಾಂಜಲಿಯಾಗಿ ತಮ್ಮನ್ನು ಅಗಲಿಸಿದ > ವಿಧಾತನಿಗೆ ಶ್ರದ್ಧಾಂಜಲಿಯಾಗಿ 87 ಕವಿತೆಗಳನ್ನು ಬರೆದು ‘ನಂದಾದೀಪ’ವೆಂಬ ಕವನ > ಸಂಕಲನವೊಂದನ್ನು ಅಣಿಗೊಳಿಸಿದ್ದರು. ಅವರ ಕ್ರಮಬದ್ಧವಾದ ವ್ಯಾಸಂಗ ಅರ್ಧಕ್ಕೇ ನಿಂತಂತೆ, > ಅವರ ದಾಂಪತ್ಯ ಜೀವನದ ಎಳೆಯೂ ಅರ್ಧದಲ್ಲಿಯೇ ಕಡಿದು ಬಿದ್ದಿತು. ಈ ಎರಡೂ ಅನಿರೀಕ್ಷಿತಗಳಿಂದ > ಅವರು ಕುಗ್ಗಿ ಕುಸಿಯದೇ ತಮ್ಮ ದೀರ್ಘಾಯುಷ್ಯವನ್ನು ಧೀಮಂತರಾಗಿಯೇ ನಿರ್ವಹಿಸಿದರು. ಸುತ್ತ > ಮುತ್ತಲೂ ಸರ್ವದಾ ಸ್ಮಿತವನ್ನು ಸೂಸುತ್ತಿದ್ದ ಸುಂದರವಾದ ಸೃಷ್ಟಿ ಸೌಂದರ್ಯ, ಕುಟೀರದ > ಸನಿಹದಲ್ಲಿಯೇ ಇದ್ದ ಕರಾವಳಿಯ ಕಡಲಿನ ಗೆಳೆತನ, ಮನೆಗೆ ಬಂದು ಹೋಗುವ ಬಂಧು ಬಳಗದವರ ಅಭಿಮಾನ, > ಸಾಹಿತ್ಯ ಬಾಂಧವರ ಸಂವಾದದ ಸವಿ ಮತ್ತು ಸಹೋದರನ ಕುಟುಂಬದ ಸಹವಾಸಗಳಲ್ಲಿ ಅವರ ಜೀವನ > ಸುಗಮವಾಗಿಯೇ ಸಾಗಿತು. ತಮ್ಮ ವ್ಯಾಸಂಗದ ಕೋಣೆಯಲ್ಲಿ ಗೋಡೆಗೆ ತೂಗು ಹಾಕಿದ್ದ ಪತ್ನಿಯ > ಭಾವಚಿತ್ರಕ್ಕೆ ಪ್ರತಿನಿತ್ಯವೂ ಒಂದು ಪುಷ್ಪವನ್ನು ಸಮರ್ಪಿಸದೆ ಅವರ ದಿನದ ಕೆಲಸ > ಮೊದಲಾಗುತ್ತಿರಲಿಲ್ಲವೆಂದು, ಮಾಸ್ತಿಯವರು ಹೇಳಿರುವ ಮಾತಿನಿಂದ ತಿಳಿದು ಬರುತ್ತದೆ. > ಮುಪ್ಪಿನಲ್ಲಿಯೂ ಮುಗ್ಧರಂತೆ ಕಂಡುಬಂದ ವಾಙ್ಮಯ ವಿಶಾರದರನ್ನು ಬನ್ನಂಜೆ ಗೋವಿಂದಾಚಾರ್ಯರು > ತಮ್ಮ ಕವಿತೆಯಲ್ಲಿ ‘ಬೆಳ್ಳಿ ಮೀಸೆಯ ಮಗು’ ಎಂದು ಕರೆದಿರುವುದು ಇಂದಿಗೂ ಒಂದು ಅಚ್ಚುಕಟ್ಟಾದ > ನುಡಿಗಟ್ಟಿನಂತಿದೆ. > > ಗೋವಿಂದ ಪೈ ಅವರ ಹೆಸರನ್ನು ಕೇಳಿದ ಕೂಡಲೇ ಅವರೊಬ್ಬ ಸುಪ್ರಸಿದ್ಧ ಸಂಶೋಧಕರೆಂದು ಎಲ್ಲರಿಗೂ > ಕೂಡಲೇ ಸ್ಫುರಿಸುವುದು. ಗೋವಿಂದ ಪೈ ಅವರ ಸಾಹಿತ್ಯ ವ್ಯವಸಾಯ, ಕಾವ್ಯಸೃಷ್ಟಿಯಿಂದ > ಅರಳಿರುವುದನ್ನು ಕೂಡಾ ಮರೆಯುವಂತಿಲ್ಲ. ಹಲವು ನಾಟಕಗಳನ್ನೂ ಅವರು ರಚಿಸಿದ್ದಾರೆ. > 1900ರಲ್ಲಿ ‘ಸುವಾಸಿನಿ’ ಎಂಬ ಮಂಗಳೂರಿನ ಪತ್ರಿಕೆಗೆ ‘ಸುವಾಸಿನಿ’ ಎಂಬ ಹೆಸರಿನಲ್ಲಿಯೇ > ಮೂರು ಕಂದ ಪದ್ಯಗಳನ್ನು ಬರೆದು ಕಳುಹಿಸಿದರು. ಅದು ಆ ಪತ್ರಿಕೆಯಲ್ಲಿ ಪ್ರಕಟವಾದುದಲ್ಲದೆ > ಅದಕ್ಕಾಗಿ ಇಟ್ಟಿದ್ದ ಬಹುಮಾನವೂ ಬಂದಿತು. ಆಗ ಪೈ ಅವರು 8ನೆಯ ತರಗತಿಯಲ್ಲಿ > ಓದುತ್ತಿದ್ದರು. 1911ರ ಸುಮಾರಿನಲ್ಲಿ ಅವರು ರವೀಂದ್ರರ ಎರಡು ಕವನಗಳನ್ನೂ, ಮಹಮ್ಮದ್ > ಇಕ್ಬಾಲ್ ಅವರ ಒಂದು ಪದ್ಯವನ್ನೂ ಅನುವಾದಿಸಿದರು. ಅಂದಿನ ‘ಸ್ವದೇಶಾಭಿಮಾನಿ’ > ಪತ್ರಿಕೆಯಲ್ಲಿ ಅವುಗಳು ಪ್ರಕಟವಾದಾಗ ದೊಡ್ಡ ಹುಯಿಲೇ ಎದ್ದಿತೆಂದು ತಿಳಿದು ಬರುತ್ತದೆ. > ಅನಂತರ ಅವರ ಗಮನ ಇಂಗ್ಲಿಷ್ ಕವಿತೆಗಳಲ್ಲಿ ಪ್ರಯೋಗವಾಗುತ್ತಿದ್ದ ಅಂತ್ಯಾಕ್ಷರ ಪ್ರಾಸಕ್ಕೆ > ಹೆಚ್ಚಾಗಿ ಮನವೊಲಿದಂತೆ ಕಾಣುತ್ತದೆ. ಆಧುನಿಕ ಕನ್ನಡ ಕವಿತೆಗಳು ಬಳಕೆಗೆ ಬಂದಂತೆಲ್ಲಾ ಪೈ > ಅವರ ಕಾವ್ಯ ಸಾಮ್ರಾಜ್ಯ ವಿಸ್ತರಿಸಲಾರಂಭಿಸಿತು. ಅವರ ಮೊದಲ ಕವನ ಸಂಕಲನವಾದ > ‘ಗಿಳಿವಿಂಡು’ವನ್ನು ಅವರ ಗುರುಗಳಾದ ಪಂಜೆ ಮಂಗೇಶರಾಯರು ‘ಬಾಲ ಸಾಹಿತ್ಯ ಮಂಡಲ’ದ ಮೂಲಕ > ಬೆಳಕಿಗೆ ತಂದರು. > > ಅವರ ಎರಡನೆಯ ಕವನ ಸಂಕಲನವಾದ ‘ನಂದಾದೀಪ’ದ ಸಂಕಲನದ ರೂಪುರೇಷೆಗಳನ್ನೆಲ್ಲಾ > ಅಣಿಗೊಳಿಸಿದ್ದರು. ಆದರೆ ಈ ಅಪೂರ್ವ ಸಂಕಲನ ಅವರ ಜೀವಿತಾವಧಿಯಲ್ಲಿ ಪ್ರಕಟವಾಗಲಿಲ್ಲ. > ಪ್ರಕಾಶಕರು ಎಚ್ಚರಿಕೆ ವಹಿಸಿ ಪೈ ಅವರ ಸೂಚನೆಗಳನ್ನು ಚಾಚೂ ತಪ್ಪದೆ ಇದನ್ನು ಬೆಳಕಿಗೆ > ತಂದರು. ಮುಂದೆ ಅಲ್ಲಿ ಇಲ್ಲಿ ಚೆಲ್ಲಿ ಹೋಗಿದ್ದ ಅವರ ಕವನಗಳನ್ನು ಹುಡುಕಿ ‘ಹೃದಯರಂಗ’ > ಎಂಬ ಮೂರನೆಯ ಕವನ ಸಂಕಲನವನ್ನೂ ಕಾವ್ಯಾಲಯದವರು ಪ್ರಕಟಿಸಿದ್ದಾರೆ. ಅದೇ ತೆರನಾಗಿ ‘ಇಟಂಕ’, > ‘ಇಂಗಡಲು’ ಮುಂತಾದ ಕವನ ಸಂಕಲನಗಳು ಕೂಡಾ ಮುಂದೆ ಮುದ್ರಣಗೊಂಡವು. ಅಷ್ಟೇ ಅಲ್ಲದೆ ಗೋವಿಂದ > ಪೈ ಅವರ ‘ಗೊಲ್ಗೊಥಾ’ ಮತ್ತು ‘ವೈಶಾಖಿ’ ಎಂಬ ಅವರ ಪ್ರಸಿದ್ಧವಾದ ಎರಡು ನೀಳ್ಗವಿತೆಗಳು > ಮೊದಲು ಬಿಡಿ ಬಿಡಿಯಾಗಿ ಅನಂತರ ಒಟ್ಟುಗೂಡಿ ಪ್ರಕಟಗೊಂಡಿವೆ. > > ಗೋವಿಂದ ಪೈ ಅವರ ಕವನಗಳಲ್ಲಿ ಚಂಪೂ ಕವಿಗಳಲ್ಲಿ ಕಂಡುಬರುವಂತೆ ಪ್ರತಿಭೆ ಮತ್ತು > ಪಾಂಡಿತ್ಯಗಳೆರಡೂ ಹದವಾಗಿ ಕೂಡಿಕೊಂಡು ಬರುತ್ತವೆ. ಅವರು ತಾವು ಬರೆಯುವ ಅಪೂರ್ವ > ಶಬ್ದಗಳಿಗೆ, ಇಲ್ಲ ತಾವೇ ಸೃಷ್ಟಿಸುವ ಪದಗಳಿಗೆ ಅಡಿಟಿಪ್ಪಣಿಯನ್ನು ಕೊಡುವುದನ್ನು ಕಂಡು > ಕೆಲವರಿಗೆ ಬೆರಗಾಗಬಹುದು. ಅವರ ಪಾಲಿಗೆ ಈ ಕವನ ಕ್ರಿಯೆ ಒಂದು ಚಪಲವಲ್ಲ. ಅದು ಒಂದು > ಅಪೂರ್ವವಾದ ಕಲಾ ಕೌಶಲ, ಕಲ್ಪನೆ ಮತ್ತು ಕಲೆಗಳ ಮಧುರ ಸಮನ್ವಯ. ಅವರಿಗೆ > ಕವಿ-ಕಾವ್ಯಗಳಲ್ಲಿರುವ ಶ್ರದ್ಧೆ, ಗೌರವಗಳು ಅಪಾರವಾದುದು. ಪೈ ಅವರು ‘ಕವಿತಾವತಾರ’ವೆಂಬ > ಕವನದಲ್ಲಿ ವಾಲ್ಮೀಕಿಯನ್ನು ನೆನೆದು, “ಸುಯ್ಯೊಂದು, ನರುಕಂಬನಿಯೊಂದು, ಬಿಕ್ಕೊಂದು – ಕವಿತೆ > ಗಡ ಮರುಕಂ” ಎಂದು ಹೇಳಿರುವ ಮಾತು ಔಪಚಾರಿಕವಲ್ಲ. ಅದು ಅವರ ಅಂತಃಕಾರಣದ ಅನುಭವವೂ ಹೌದು. > ಕವಿತೆಯ ಕರ್ಮವನ್ನು ಮರ್ಮವನ್ನು ಚೆನ್ನಾಗಿ ಚಿಂತನೆ ಮಾಡಿರುವ ಅವರು “ಕವಿತೆ ಮತಿಜಲ ನಲಿನ, > ವ್ಯಸನ ವನಧಿಯ ಪುಲಿನ, ಕವಿತೆ ಗಾನದ ಸುಗ್ಗಿ, ಸೊಬಗ ತನಿಗೂಡಿ, ಕವಿತೆ ನವರಸ ರಂಗವದು, > ತ್ರಿವೇಣಿಯ ಸಂಗಮಿದೊ ನೆನಸು ಕನಸು ಮನಸ್ಸಿನ ತ್ರಿತಯಮೊಡಗೂಡಿ” ಎಂದು ವರ್ಣಿಸುವ ಅವರು > ಕವಿತೆಗೆ ಶೋಭಾವಹವಾದ ಪ್ರಾಸ, ಛಂದಸ್ಸು, ಶೈಲಿ, ಅರ್ಥಲಾಲಿತ್ಯಗಳನ್ನು ಪುರಸ್ಕರಿಸುವ ರೀತಿ > ವಿಶಿಷ್ಟವಾದದ್ದು. > > ಗೋವಿಂದ ಪೈ ಅವರ ದೇಶಭಕ್ತಿ ತಮ್ಮ ತವರುನಾಡಾದ ತುಳುನಾಡಿನಿಂದ ಕುಡಿಯೊಡೆದು, ಕನ್ನಡನಾಡಿನ > ಸುತ್ತಲೂ ಬಳ್ಳಿವರಿದು ಕಡೆಗೆ ಭಾರತಾಂಬೆಯ ಮುಡಿಯಲ್ಲಿ ಹೂವಾಗಿ ಅರಳಿ ಪರಿಣಮಿಸುತ್ತದೆ. > “ಜಯ ಜಯ ತುಳುವ ತಾಯೆ ಮಣಿವೆ, ತಂದೆ ತಾಯಂದಿರ ತಾಯೆ, ಭುವನದಿ ತ್ರಿದಿವಚ್ಛಾಯೆ” ಎಂಬುದು > ಅವರ ತುಳುನಾಡಿನ ಕುರಿತ ಮೊದಲಸಾಲುಗಳು. “ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ, > ಹರಸು ತಾಯೆ, ಸುತರ ಕಾಯೆ. ನಮ್ಮ ಜನ್ಮದಾತೆಯೆ” ಎಂದು ಅಂದು ಅವರು ಕೊರಳೆತ್ತಿ ಹಾಡಿದ ಹಾಡು > ಎಂದೆಂದಿಗೂ ತನುಮನಗಳಲ್ಲಿ ಮಾರ್ದನಿಸುತ್ತಿರುವುದು. “ತನು ಕನ್ನಡ, ಮನ ಕನ್ನಡ, ಧನ > ಕನ್ನಡವೆಮ್ಮೆವು” ಎಂಬ ಮಾತುಗಳು, ಅವರ ಬಾಯಿಂದ ಹೊರಹೊಮ್ಮಿದ ಮಂತ್ರಗಳೇ ಸರಿ! ಮುಂದೆ > “ಭಾರತದಲಿ ಸರ್ವಧರ್ಮಮೊಂದಲಿ ಸದನಂ, ಮಾಣಿಸಲೀಕೆಯ ಸ್ವಸ್ತಿಧ್ವಜಮಧರ್ಮದೊಳಕದನಂ” ಎಂದು > ಶುಭವನ್ನು ಕೋರುವರು. ಕಡೆಗೆ ‘ಭಾರತಾಂಬೆಯ ಮಹಿಮೆಯನ್ನು’ ಮತ್ತೆ ಮತ್ತೆ ಮೆಚ್ಚಿಕೊಂಡು > ‘ಭಾರತವನಳಿಯುತ್ತ ನನಗೆ ಜೀವನವೆತ್ತ? ಭಾರತವೇ ನನ್ನುಸಿರು, ನನ್ನೊಗೆದ ‘ಬಸಿರು’ ಎಂದು > ತಮ್ಮ ಭಕ್ತಿಯ ಸುಮಮಾಲೆಯನ್ನು ಆಕೆಯ ಮುಡಿಗೆ ತೊಡಿಸಿ ‘ಭಾರತ ಯಶೋಗಾನವೆನ್ನೆದೆಯ ತಾನ’ > “ಭಾರತಾಂಬೆಯ ಭಕ್ತಿ ನನಗಾತ್ಮಶಕ್ತಿ” ಎಂದು ಹಿಗ್ಗುವರು. > > ಸ್ವಾತಂತ್ರ್ಯದ ನಂತರದಲ್ಲಿ ಸ್ವಾತಂತ್ರ್ಯದಾತನನ್ನು ನೆನೆದು “ಏನು ತೋರಿಸಿದೆಮಗೆ? > ಮೇಣೇಮನಿತ್ತೆ: ಕಳಕೊಂಡ ಬಿಡುಗಡೆಯನೆಮಗಿತ್ತೆ ತಂದೆ! ಆದರೀಗಣ ಕಥೆಯ ಬಲ್ಲೆಯಾ ಮತ್ತೆ? > ರಾಹುವನು ತೊಲಗಿಸಿದೆ, ಕೇತುವನು ತಂದೆ” ಎಂದು ಮರುಗುತ್ತಾರೆ. ಗಾಂಧೀಜಿಯನ್ನು ಸ್ಮರಿಸಿ > “ಇನ್ನಿನಿಸು ನೀ ಮಹಾತ್ಮ ಬದುಕಬೇಕಿತ್ತು!” ಎಂದು ಯಾತನೆ ಪಡುತ್ತಾರೆ. ಸ್ವತಂತ್ರ ಭಾರತದ > ಅತಂತ್ರವನ್ನು ಕಂಡು ವರ್ಷವರ್ಷವೂ ಬರೆದಿರುವ ಚತುರ್ದಶಪದಿಗಳನ್ನು ನೋಡಿದರೆ, ಕವಿಯ ಕಂಬನಿಯ > ಕುಯ್ಲನ್ನು ಕಾಣಬಹುದು. ಗೋವಿಂದ ಪೈ ಅವರ ಈ ದೇಶ ಪ್ರೇಮ ಸ್ವದೇಶಕ್ಕೆ ಮಾತ್ರ ಸೀಮಿತವಾಗದೆ, > ದೂರದ ತುರ್ಕಿಯನ್ನು ಕಬಳಿಸಲು ಇಟಲಿಯು ಮಾಡಿದ ಸನ್ನಾಹವನ್ನು ಖಂಡಿಸುವವರೆಗೂ > ವ್ಯಾಪಿಸಿರುವುದು. > > ಗೋವಿಂದಪೈ ಅವರ ಅಧ್ಯಾತ್ಮಿಕ ದೃಷ್ಟಿ ಹೇಗೆ ಸರ್ವಜನಾದರಣೀಯವಾಗಿದೆ ಎನ್ನುವುದನ್ನು ಅವರ > ಕೆಲವು ಕವನಗಳಿಂದ ಗ್ರಹಿಸಬಹುದು. ಪಂಡರಾಪುರದ ವಿಠೋಬನನ್ನು ಮೊದಲ್ಗೊಂಡು, ಜೆರುಸಲೇಮಿನ > ಯೇಸು ಕ್ರಿಸ್ತನ ವರೆಗೆ ಅವರ ಆಧ್ಯಾತ್ಮಿಕ ಧಾರೆ ಪ್ರವಹಿಸಿದೆ. ಅವತಾರ ಪುರುಷರಾದ > ಶ್ರೀಕೃಷ್ಣ ಮತ್ತು ಬುದ್ಧರಲ್ಲಿ ಅವರಿಗೆ ಸಮಾನ ಗೌರವ ಭಾವನೆ. > > ಎಲ್ಲಿಯ ಕೃಷ್ಣ – ಎಲ್ಲಿಯ ಕ್ರಿಸ್ತ? ಆದರೆ ಗೋವಿಂದ ಪೈ ಅವರ ಆದ್ಯಾತ್ಮಿಕ ಪ್ರಜ್ಞೆಗೆ ಆ > ಇಬ್ಬರೂ ಒಂದೇ ಶಕ್ತಿಯ ಎರಡು ಅವತಾರಗಳೆಂಬ ಪೂಜ್ಯಭಾವನೆ! ಸಂಪ್ರದಾಯಬದ್ಧವಾದ ಧಾರ್ಮಿಕ > ಪ್ರಪಂಚದಲ್ಲಿ ಇದಕ್ಕಿಂತಲೂ ಕ್ರಾಂತಿಕಾರಕವಾದ ತರ್ಕವನ್ನು ಹೂಡಲು ಸಾಧ್ಯವೇ? ಪೈ ಅವರ > ‘ಯೇಸುಕೃಷ್ಣ’ ಎಂಬ ಕವಿತೆಯಲ್ಲಿ ಈ ಅಸದೃಶ ಸಾಮ್ಯವನ್ನು ಎತ್ತಿ ತೋರಿಸಿದ್ದಾರೆ. ಕೃಷ್ಣನು > ಸೆರೆಮನೆಯಲ್ಲಿ ಹುಟ್ಟಿದರೆ, ಯೇಸುವು ದನದ ಕೊಟ್ಟಿಗೆಯಲ್ಲಿ ಹುಟ್ಟಿದವನು. ಒಬ್ಬ ಕೊಳಲೂದಿ > ದನಗಾಹಿ ಎನಿಸಿದರೆ, ಇನ್ನೊಬ್ಬ ಬಡಗಿಯ ಕೆಲಸವನ್ನು ಅವಲಂಬಿಸಿದವನು. ಒಬ್ಬ ರಾಧೆಯ > ಪ್ರೇಮಪಾಶದಲ್ಲಿ ಬಂಧಿತನಾದರೆ, ಇನ್ನೊಬ್ಬ ಮಗ್ದಲದ ಮರಿಯಳ ಅನುರಾಗಕ್ಕೆ ಪಾತ್ರನಾಗುತ್ತಾನೆ. > ಒಬ್ಬ ಕೌರವನಿಂದ ಬಂಧಿತನಾದರೆ, ಇನ್ನೊಬ್ಬನು ತನ್ನವರ ಮೂಲಕವೇ ತಲೆಗೆ ಮುಳ್ಳಿನ > ಕಿರೀಟವನ್ನು ತೊಡಬೇಕಾಗುತ್ತದೆ. ಈ ತೆರನಾದ ಸಾದೃಶ್ಯ ಪರಂಪರೆಯನ್ನು ಪಟ್ಟಿ ಮಾಡಿ, ಕಡೆಗೆ > ಪೈ ಅವರು “ಯದುನಾಥನೆ ಯೂದನಾಥನಲ್ಲವೇ?” ಎಂದು ವಿಸ್ಮಯಚಕಿತರಾಗುವರು. > > ಉಡುಪಿಯ ಕೃಷ್ಣನಲ್ಲಿ ಅವರ ಮೊರೆ ವಿಶಿಷ್ಟವಾಗಿದೆ. ದ್ವಾಪರಯುಗದಲ್ಲಿ ಮಹಾಭಾರತದಲ್ಲಿ > ಸೂತ್ರಧಾರನಂತಿದ್ದು ಧರ್ಮವನ್ನು ಉದ್ಧರಿಸಿದಂತೆ ಇಂದಿನ ಭಾರತದ ಗೋಳನ್ನು ಪರಿಹರಿಸಬೇಕೆಂದು > ಆತನಲ್ಲಿ ಕವಿ ಮೊರೆಯಿಡುವರು. “ಬಡಗೋಳ ಕೇಳೆಮ್ಮ ಕಡಗೋಲ ಕನ್ನ! ಸಡಗರಿಸೋ ಬಿಡುಗಡಿಸೆ > ಭಾರತದ ನಿನ್ನ!” ಎಂಬ ನುಡಿ ಪೈ ಅವರ ಹೃದಯವೈಶಾಲ್ಯಕ್ಕೆ ಸಾಕ್ಷಿಯಂತಿದೆ. ‘ಶ್ರೀ > ಗೊಮ್ಮಟಜಿನಸ್ತುತಿ’ಯಲ್ಲಿ ಅವರ ಪಾರಮಾರ್ಥಿಕ ದೃಷ್ಟಿ ಆ ವಿಗ್ರಹದಷ್ಟೇ ಎತ್ತರವೂ ಬಿತ್ತರವೂ > ಆದುದು. > > ತನ್ನ ದುರ್ದೈವದಿಂದ ಮೂರು ಮಕ್ಕಳನ್ನು ಒಟ್ಟಿಗೆ ಕಳೆದುಕೊಂಡ ಹತಭಾಗಿನಿಯೊಬ್ಬಳ ಕುರಿತು > ಬರೆದ ಮಾತಿನಲ್ಲಿ ‘ಅಂದಿನಿಂದಾಕೆ ನಕ್ಕಿಲ್ಲ, ಅತ್ತಿಲ್ಲ’ ಎಂಬ ಪಂಕ್ತಿ ಪೂರ್ಣಪ್ರಮಾಣದ > ಪಶ್ಚಾತ್ತಾಪ ಪ್ರತಿಸ್ಪಂದಿಸುತ್ತದೆ. ‘ಮಾತಂಗಿ’ ಎಂಬ ಕಥನ ಕವನದಲ್ಲಿ ಅಸ್ಪೃಶ್ಯ ಜನರ > ಕುರಿತ ಅನುಕಂಪೆ, ‘ಭಿಕ್ಷುವೂ ಪಕ್ಷಿಯೂ’ ಎಂಬಲ್ಲಿ ಗೋಚರವಾಗುವ ಭಿಕ್ಷುವಿನ ಸಹನೆ, > ‘ವಾಸವದತ್ತೆ’ ಎಂಬಲ್ಲಿ ಪರಿತ್ಯಕ್ತ ವೇಶ್ಯೆಯ ಬಗ್ಗೆ ಪ್ರಕಾಶಿತವಾಗುವ ಉಪಗುಪ್ತನ > ಉದಾರದೃಷ್ಟಿ ಮೊದಲಾದುವು ಕವಿಯ ಮಾನವೀಯತೆಯನ್ನು ಪ್ರತಿಬಿಂಬಿಸುವ ಉತ್ತಮ ಉದಾಹರಣೆಗಳು. > > ಗೋವಿಂದ ಪೈ ಅವರು ವಿಭೂತಿ ಮಹತ್ವವನ್ನು ಕಂಡಲ್ಲಿ ಕೈಮುಗಿದು ತಲೆಬಾಗುವ ತಲೆಮಾರಿನವರು. ಈ > ಕ್ಷೇತ್ರದಲ್ಲಿ ಅವರಿಗೆ ಕಾಲ ದೇಶಗಳ ಅಂತರವಾಗಲಿ; ಜಾತಿ, ಮತ, ಪಂಥಗಳ ತಾರತಮ್ಯವಾಗಲಿ ಇಲ್ಲ. > ಅವರ ಈ ಪೂಜ್ಯ ಭಾವನೆ ಯೇಸುವಿನ ಕಡೆಯ ದಿನವನ್ನು ಕುರಿತು ‘ಗೊಲ್ಗೊಥಾ’ ಮತ್ತು ಬುದ್ಧನ ಕಡೆಯ > ದಿನವನ್ನು ಕುರಿತ ‘ವೈಶಾಖಿ’ ಎಂಬ ನೀಳ್ಗವಿತೆಗಳಲ್ಲಿ ವಿಶ್ವರೂಪವನ್ನೇ ತಾಳಿರುವುದನ್ನು > ಕಾಣಬಹುದು. ಈ ಎರಡೂ ಕೃತಿಗಳೂ ಧಾರ್ಮಿಕ ಪುರುಷರನ್ನು ಕುರಿತಾದುದರಿಂದ ವಿಷಯವನ್ನು > ಪ್ರತಿಪಾದಿಸುವಲ್ಲಿ ಕವಿಯ ಹೊಣೆ ಬಹಳ ದೊಡ್ಡದಾದುದು. ಆ ಸಲುವಾಗಿಯೇ ಗೋವಿಂದ ಪೈ ಅವರು > ‘ಗೊಲ್ಗೊಥಾ’ದ ವಸ್ತುವನ್ನು ಸಂಗ್ರಹಿಸುವಲ್ಲಿ ಮೂಲ ಆಕರಗಳನ್ನು ಎಷ್ಟು ನಿಷ್ಠೆಯಿಂದ > ವ್ಯಾಸಂಗ ಮಾಡಿರುವರೆನ್ನುವುದನ್ನು, ‘’ವೈಶಾಖಿ’ಗೆ ಸಂಬಂಧಿಸಿದ ಪಾಳಿಭಾಷೆಯ ಗ್ರಂಥಗಳನ್ನೇ > ಅವಲಂಬಿಸಿರುವರೆಂಬುದನ್ನೂ ಅವರು ಕೊಟ್ಟಿರುವ ಟಿಪ್ಪಣಿಗಳಿಂದ ತಿಳಿಯಬಹುದು. ಅವರು > ಕೈಕೊಂಡಿರುವ ಕೆಲಸವಾದರೋ ಆಯಾ ಧರ್ಮದ ಪ್ರಚಾರವಲ್ಲ. ಆಯಾ ಮಹಾಪುರುಷರ ಮರಣದ ಮಹಾತ್ಮೆ > ಮಾತ್ರ! > > ಗೊಲ್ಗೊಥಾದಲ್ಲಿ ಯೇಸುವಿನ ಮೇಲಿನ ಅಂತಃಕರಣವೆಲ್ಲ ತನಗೆ ತಾನೇ ರೂಪುವೆತ್ತು ಕಡೆದು > ನಿಲ್ಲಿಸಿದ ಜೀವಂತ ಕೃತಿಯೆನ್ನಿಸಿ ಕನ್ನಡದಲ್ಲಿ ಅಮರವಾಗಿದೆ. ಆ ಬಳಿಕ ಕೆಲವು ವರ್ಷಗಳ > ತರುವಾಯ ರಚಿಸಿದ ‘ವೈಶಾಖಿ’ ಯಲ್ಲಿ ವೈಶಾಖ ಶುಕ್ಲ ಪೂರ್ಣಿಮೆಯಂದು ರಾಜಕುಮಾರನಾಗಿ ಹುಟ್ಟಿದ > ಸಿದ್ಧಾರ್ಥನು, ಸರ್ವವನ್ನೂ ತ್ಯಾಗ ಮಾಡಿ ಸಂನ್ಯಾಸವನ್ನು ಕೈಗೊಂಡು, ವೈಶಾಖ ಶುಕ್ಲ > ಪೂರ್ಣಮಿಯಂದೇ ಜ್ಞಾನೋದಯವನ್ನು ಪಡೆದು ಬುದ್ಧನೆಂಬ ಹೆಸರಿನಿಂದ ಜಗತ್ಪ್ರಸಿದ್ಧನಾಗಿ, ವೈಶಾಖ > ಶುಕ್ಲ ಪೂರ್ಣಮಿಯಂದೇ ಪರಿನಿರ್ವಾಣವನ್ನು ಪಡೆದುದರಿಂದ ಕವಿಗಳು ಈ ಹೆಸರನ್ನು ಇಟ್ಟಿರುವುದು > ಅರ್ಥಪೂರ್ಣವಾಗಿದೆ. > > ಕವಿ ಮತ್ತು ಸಂಶೋಧಕನ ಪ್ರಜ್ಞೆಗಳೆರಡನ್ನೂ ಒಳಗೊಂಡಿರುವ ಗೋವಿಂದ ಪೈ ಅವರ ವಿಶಿಷ್ಟ > ವ್ಯಕ್ತಿತ್ವ ಡಾ. ಎ. ಎನ್. ಉಪಾಧ್ಯೆ ಅಂತಹ ಮಹಾನ್ ಸಂಶೋಧಕರನ್ನೂ ವಿಸ್ಮಿತಗೊಳಿಸಿದೆ. > ಗೋವಿಂದ ಪೈ ಅವರ ಸಂಶೋಧನ ಪ್ರಬಂಧಗಳನ್ನು ಸಾವಧಾನವಾಗಿ ಪರಿಶೀಲಿಸಿದಲ್ಲಿ ಅವರ > ಪ್ರತಿಯೊಂದು ಲೇಖನವೂ ಅಪೂರ್ವವಾದ ಗಣಿ ಎಂದು ಹಲವಾರು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. > ಪಾರ್ಶ್ವನಾಥ ತೀರ್ಥಂಕರ ಚರಿತೆ, ಬಾಹುಬಲಿ ಗೊಮ್ಮಟೇಶ್ವರ ಚರಿತೆ, ಭಗವಾನ್ ಬುದ್ಧ ಮುಂತಾದ > ಕೆಲವು ಲೇಖನಗಳನ್ನು ಇಲ್ಲಿ ಹೆಸರಿಸಬಹುದು. ಗೋವಿಂದ ಪೈ ಸಂಶೋಧನ ಸಂಪುಟ 1995ರ ವರ್ಷದಲ್ಲಿ > ಪ್ರಕಟವಾಗಿದೆ. > > ಗೋವಿಂದ ಪೈ ಅವರು ‘ಚಿತ್ರಭಾನು’, ‘ಹೆಬ್ಬೆರಳು’, ‘ತಾಯಿ’, ‘ಕಾಯಾಯ್ ಕೊಮಾಜಿ’ ಮುಂತಾದ > ನಾಟಕಗಳನ್ನು ರಚಿಸಿದ್ದಾರೆ. ‘ಕನ್ನಡದ ಮೊರೆ’ ಎಂಬ ಸಂಕಲನದಲ್ಲಿ ಅವರು ಬರೆದ ಹಲವು > ವ್ಯಕ್ತಿ ಚಿತ್ರಗಳು, ಆತ್ಮ ಕಥನಗಳು ಮತ್ತು ಭಾಷಣಗಳು ಅಡಕವಾಗಿವೆ. ಪ್ರಬಂಧಗಳಲ್ಲಿ > ‘ಆತ್ಮಕಥನ’ ಅವರ ಸಾಹಿತ್ಯ ಕೃಷಿಯ ಮಥನದ ನವನೀತವೆನಿಸಿದೆ. ‘ಬರಹಗಾರನ ಹಣೆಬರಹ’ ಲೇಖಕನ > ಕಷ್ಟನಿಷ್ಟುರಗಳ ಕೈಗನ್ನಡಿಯಂತಿದೆ. ‘ಕನಸಾದ ನನಸು’ ಪೈ ಅವರಿಗೆ ತಮ್ಮ ಗುರುಗಳಾದ > ಪಂಜೆಯವರಲ್ಲಿದ್ದ ಪೂಜ್ಯಭಾವದ ಪ್ರತೀಕದಂತಿದೆ. ಅವರ ಒಡನಾಡಿಗಳಾದ ಎಂ.ಎನ್. ಕಾಮತ್, > ಕಿಲ್ಲೆ ಅವರ ಸ್ನೇಹದ ಬಗ್ಗೆ ಬರೆದಿರುವ ಅವರ ಬರಹಗಳು, ಎಂ.ಆರ. ಶ್ರೀನಿವಾಸ ಮೂರ್ತಿಗಳಿಗೆ > ನೆನಪು, ಬೇಂದ್ರೆಯವರಿಗೆ ಐವತ್ತು ದಾಟಿದ್ದಕ್ಕೆ ಸಲ್ಲಿಸಿದ ಹರಕೆ ಇವೆಲ್ಲಾ ಮನನೀಯವೆನಿಸಿವೆ. > > ಇಂಥ ಮಹಾಚೇತನರಾದ ಗೋವಿಂದ ಪೈ ಅವರು ಸೆಪ್ಟಂಬರ್ 6, 1963ರಲ್ಲಿ ತಮ್ಮ ಎಂಭತ್ತನೆಯ > ವಯಸ್ಸಿನಲ್ಲಿ ಈ ಲೋಕವನ್ನಗಲಿದರು. ಅವರು ಬಿಟ್ಟು ಹೋಗಿರುವ ಸಾರಸ್ವತ ಸಂಪತ್ತು > ಅಪಾರವಾಗಿರುವುದರಿಂದ, ಅವರ ಆ ಉಪಕಾರ ಸ್ಮರಣೆಗಾಗಿ ಕನ್ನಡಿಗರು ಅವರಿಗೆ > ಚಿರಋಣಿಗಳಾಗಿದ್ದಾರೆ.. > > ಸಂಗ್ರಹ > ~ಕನ್ನಡಿಗ ಬಸವರಾಜು > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.