very nice article 2016-03-06 21:20 GMT+05:30 HAREESHKUMAR K Agasanapura <harihusk...@gmail.com >:
> http://kanaja.in/archives/127928 > > *ವಿಜ್ಞಾನ ದಿನ ಮತ್ತು ವೈಜ್ಞಾನಿಕ ಮನೋವೃತ್ತಿ* > > ಪ್ರತಿ ವರ್ಷ ಫೆಬ್ರುವರಿ 28ರಂದು ನಾವು ಭಾರತೀಯರು ‘ವಿಜ್ಞಾನ ದಿನ’ವನ್ನು ಆಚರಿಸುತ್ತೇವೆ. > ಏಕೆಂದರೆ ಫೆಬ್ರುವರಿ 28 ಅನ್ನೋದು ‘ರಾಮನ್ ಎಫೆಕ್ಟ್’ ಪ್ರಕಟವಾದ ದಿನ. ಬೆಳಕಿನ ಪ್ರತಿಫಲನದ > ಕುರಿತು ಬೆಂಗಳೂರಿನ ಪ್ರೊ. ಸಿ.ವಿ. ರಾಮನ್ ನಡೆಸಿದ ಆ ಸಂಶೋಧನೆಗೆ ‘ರಾಮನ್ ಎಫೆಕ್ಟ್’ > ಎಂತಲೇ ಜಾಗತಿಕ ಖ್ಯಾತಿ ಬಂದಿದೆ ಅಷ್ಟೇ ಅಲ್ಲ, ಅವರಿಗೆ ಹಾಗೂ ನಮ್ಮ ದೇಶಕ್ಕೆ ವಿಜ್ಞಾನದ > ಮೊದಲ ನೊಬೆಲ್ ಪ್ರಶಸ್ತಿಯನ್ನೂ ಅದು ತಂದು ಕೊಟ್ಟಿದೆ. ಅದರ ನೆನಪಿಗಾಗಿ ಫೆಬ್ರುವರಿ 28ನ್ನು > ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನಾಗಿ ಆಚರಿಸಲಾಗುತ್ತಿದೆ. > ವೈಜ್ಞಾನಿಕ ಮನೋಭಾವ ನಮ್ಮ ಬದುಕಿನಲ್ಲಿ ಹಾಸು ಹೊಕ್ಕಾಗಿರಬೇಕು ಎಂಬ ಅಂಶವನ್ನು ನಾವು > ಭಾರತೀಯರು ನಮ್ಮ ಸಂವಿಧಾನದಲ್ಲೇ ಅಳವಡಿಸಿಕೊಂಡಿದ್ದೇವೆ. ಅದನ್ನು ಮತ್ತೆ ಮತ್ತೆ > ನೆನಪಿಸಿಕೊಳ್ಳಬೇಕಾದ ದಿನ ಫೆಬ್ರುವರಿ 28. ನೆನಪಿಡಬೇಕಾದ ಸಂಗತಿ ಏನೆಂದರೆ, ಫೆಬ್ರುವರಿ 28 > (1928) ಸರ್ ಸಿ.ವಿ. ರಾಮನ್ನರ ಹುಟ್ಟುಹಬ್ಬ ಅಲ್ಲ, ಆದರೆ ಅವರ ಆ ಮಹತ್ವದ ಸಂಶೋಧನೆ > ಪ್ರಕಟವಾದ ದಿನ. ಅದು ಪ್ರಕಟವಾಗಿ ಎರಡು ವರ್ಷಗಳ ನಂತರ, 1930ರಲ್ಲಿ ಸರ್ ರಾಮನ್ ಅವರಿಗೆ > ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಯಿತು. ಹಾಗಾಗಿ ಫೆಬ್ರುವರಿ 28 ರಾಮನ್ನರನ್ನು ಮತ್ತು > ವಿಜ್ಞಾನವನ್ನು ಗೌರವಿಸಬೇಕಾದ ದಿನ. > ವಿಜ್ಞಾನವನ್ನು ನಾವು ಯಾಕೆ ಗೌರವಿಸಬೇಕು ಅಂದರೆ, ಅದು ನಮ್ಮನ್ನು ನಾಗರಿಕರನ್ನಾಗಿ > ಮಾಡಿದೆ. ನಮ್ಮಲ್ಲಿ ‘ವೈಜ್ಞಾನಿಕ ಶೋಧ ಬುದ್ಧಿ’ ಇಲ್ಲದೇ ಇದ್ದಿದ್ದರೆ ನಾವೂ ಇತರ ಪ್ರಾಣಿಗಳ > ಹಾಗೆ ಗುಹೆಯಲ್ಲೊ ಮರದ ಪೊಟರೆಯಲ್ಲೊ, ಬಂಡೆಗಳ ಸಂದುಗಳಲ್ಲೊ ಚಳಿಗೆ ಮಳೆಗೆ, > ರೋಗರುಜಿನೆಗಳಿಗೆ ತುತ್ತಾಗುತ್ತ ಹೇಗೋ ಬದುಕುತ್ತಿದ್ದೆವು. > ಆಧುನಿಕ ವಿಜ್ಞಾನ ನಮಗೆ ಹೇಗೆಲ್ಲ ಸಹಾಯ ಮಾಡಿದೆ ಅನ್ನೋದನ್ನು ನೋಡಬೇಕಾದರೆ ನಾವು ಹಿಂದಿನ > ಕಾಲದ ರಾಜ ಮಹಾರಾಜರ ಬದುಕನ್ನು ಹೋಲಿಸಿ ನೋಡಬೇಕು. ಎಷ್ಟೇ ಬಲಾಢ್ಯ ರಾಜನಾಗಿದ್ದರೂ ಅವನಿಗೆ > ಹಲ್ಲು ನೋವು ಬಂದರೆ ವಾರಗಟ್ಟಲೆ, ತಿಂಗಳುಗಟ್ಟಲೆ ತೀರ ದುರ್ಬಲನಾಗುತ್ತಿದ್ದ. ಕುದುರೆ ಅಥವಾ > ರಥದ ಮೇಲೆ ಹೆಚ್ಚೆಂದರೆ ದಿನಕ್ಕೆ 15-20 ಮೈಲು ಸವಾರಿ ಮಾಡಬಹುದಿತ್ತು. ಬೆನ್ನು ನೋವು > ಬಂದರೆ ಅಲ್ಲೇ ವಾರಗಟ್ಟಲೆ ತಿಂಗಳುಗಟ್ಟಲೆ ನೋವಿನಿಂದ ನರಳಬೇಕಿತ್ತು. 50-60 ವರ್ಷಕ್ಕೆ > ವೃದ್ಧಾಪ್ಯ ಬಂತೆಂದರೆ ಹಲ್ಲುಗಳು ಉದುರಿ, ಕಣ್ಣೆಲ್ಲ ಮಂಜಾಗಿ, ಮೊಣಕಾಲು ನೋವು, ಕಿವುಡುತನ > ಏನೆಲ್ಲ ಬರುತ್ತಿತ್ತು. ಸಿಡುಬು, ಪ್ಲೇಗಿನಂಥ ಮಹಾಮಾರಿ ಬಂದರಂತೂ ಎಂಥ ಮಹಾಸೈನ್ಯವನ್ನೂ > ಹೊಸೆದು ಹಾಕುತ್ತಿತ್ತು. > ಇಂದಿನ ಕಾಲದ ತೀರ ಸಾಮಾನ್ಯ ಜನರೂ ಹಿಂದಿನ ಕಾಲದ ಮಹಾರಾಜರಿಗಿಂತ ಸುಖಿಗಳಾಗಿದ್ದೇವೆ. > ಏನೆಲ್ಲ ರೋಗ ರುಜಿನಗಳನ್ನು ನಾವು ಜೈಸಿದ್ದೇವೆ. ಎಷ್ಟೆಲ್ಲ ಬಗೆಯ ಹಾವು, ಹುಲಿ, ಚೇಳು, > ಹುಚ್ಚುನಾಯಿ, ಬೆಂಕಿ, ಬರಗಾಲ, ಚಳಿ, ಎಲ್ಲವನ್ನೂ ಜೈಸಿದ್ದೇವೆ. ಹಸಿವೆಯನ್ನು ದೂರ > ಅಟ್ಟಿದ್ದೇವೆ. ಅದೆಲ್ಲ ವಿಜ್ಞಾನ- ತಂತ್ರಜ್ಞಾನದಿಂದ ಸಾಧ್ಯವಾಗಿದೆ. ಇಡೀ ಜಗತ್ತನ್ನು ನಾವು > ಕೂತಲ್ಲೇ ಸಂಪರ್ಕಿಸುತ್ತೇವೆ; ಬೇಕೆಂದರೆ ಒಂದು ದಿನದಲ್ಲೇ ಸುತ್ತಿ ಬರುತ್ತೇವೆ. > ಹಾಗೆ ನೋಡಿದರೆ ನಾವು ತೀರ ದುರ್ಬಲ ಜೀವಿಗಳು. ತೀರ ಪರಾವಲಂಬಿಗಳು. ಒಂದು ಹುಲ್ಲು > ಗರಿಕೆಯನ್ನೇ ನೋಡಿ: ಅದಕ್ಕೆ ತುಸು ಬಿಸಿಲು, ತುಸು ನೀರು, ತುಸು ಮಣ್ಣು ಇದ್ದರೆ ಸಾಕು ತನ್ನ > ಆಹಾರವನ್ನು ತಾನೇ ತಯಾರಿಸಿಕೊಳ್ಳುತ್ತದೆ. ನಮಗೆ ಅದು ಸಾಧ್ಯವಿಲ್ಲ. ಬೀದಿನಾಯಿಗೆ > ಹೊಟ್ಟೆಶೂಲೆ ಬಂದರೆ ಅದು ಎಂಥದ್ದೊ ಸಸ್ಯವನ್ನು ತಿಂದು ವಾಂತಿ ಮಾಡಿಕೊಂಡು ಸರಿಯಾಗುತ್ತದೆ. > ಗಾಯವಾದರೆ ಅದು ತನ್ನದೇ ಜೊಲ್ಲಿನಿಂದಲೋ ಅಥವಾ ಬೂದಿಗುಡ್ಡೆಯ ದೂಳಿನಿಂದಲೋ ತನ್ನ ಗಾಯವನ್ನು > ತಾನೇ ವಾಸಿ ಮಾಡಿಕೊಳ್ಳುತ್ತದೆ. ನಮಗೆ ಅದು ಸಾಧ್ಯವಿಲ್ಲ. ಇರುವೆ ಗೆದ್ದಲುಗಳಿಗೆ ಮಳೆ ಬರುವ > ಸೂಚನೆ ಮೊದಲೇ ಗೊತ್ತಾಗುತ್ತದೆ. ವನ್ಯಪ್ರಾಣಿಗಳಿಗೆ ಭೂಕಂಪನದ ಮುನ್ಸೂಚನೆ ಮೊದಲೇ > ಗೊತ್ತಾಗುತ್ತದೆ. ತಿಮಿಂಗಲುಗಳಿಗೆ ಸುನಾಮಿಯ ಸೂಚನೆ ಗೊತ್ತಾಗುತ್ತದೆ. ಪಾತರಗಿತ್ತಿಗಳಿಗೆ > ಸುಂಟರಗಾಳಿಯ ಮುನ್ಸೂಚನೆ ಸಿಗುತ್ತದೆ. ಮರದ ಮೇಲೆ ಗೂಡು ಕಟ್ಟಿಕೊಂಡ ಪಕ್ಷಿಗೆ ಹಾವು > ಬರುತ್ತಿದೆ ಎಂಬುದು ನಡುರಾತ್ರಿಯಲ್ಲೂ ವಾಸನೆಯ ಮೂಲಕವೇ ಗೊತ್ತಾಗುತ್ತದೆ. > ನಮಗೆ ಅಂಥ ಯಾವ ಸೂಚನೆಗಳೂ ಸಿಗುವುದಿಲ್ಲ; ನಮ್ಮ ಸಂವೇದನೆಗಳೆಲ್ಲ ಮೊಂಡಾಗಿವೆ. > ಸವೆದುಹೋಗಿವೆ. ಆದರೆ ನಮ್ಮ ಬುದ್ಧಿಶಕ್ತಿ ಚುರುಕಾಗಿದೆ. ಹಿಂದಿನ ಕಾಲದಲ್ಲಿ ರಾವಣಾಸುರ > ಅಷ್ಟ ದಿಕ್ಪಾಲಕರನ್ನು ತನ್ನ ಊಳಿಗದಲ್ಲಿ ಇಟ್ಟುಕೊಂಡಿದ್ದ ಎಂಬ ಕತೆಯನ್ನು ಕೇಳಿದ್ದೇವೆ. > ನಾವು ಇಂದು ಅಷ್ಟ ದಿಕ್ಪಾಲಕರನ್ನು, ಪಂಚ ಮಹಾಭೂತಗಳನ್ನು ನಮಗೆ ಬೇಕೆಂದಂತೆ > ದುಡಿಸಿಕೊಳ್ಳುತ್ತೇವೆ. ಬೆಂಕಿಯನ್ನು ನಮಗಿಷ್ಟ ಬಂದ ಹಾಗೆ ಪಳಗಿಸುತ್ತೇವೆ. ಬೆಂಕಿಯ > ಉಗ್ರಜ್ವಾಲೆಯಲ್ಲಿ ಮರಳನ್ನೂ ಕರಗಿಸಿ ಅದರಿಂದ ಗಾಜನ್ನು ಸೃಷ್ಟಿ ಮಾಡಿ ಅದರಿಂದ > ಸೂಕ್ಷ್ಮದರ್ಶಕ, ದೂರದರ್ಶಕಗಳನ್ನು ತಯಾರಿಸಿ ಅವುಗಳ ಮೂಲಕ ಜಗತ್ತನ್ನು ನೋಡುತ್ತೇವೆ, > ನಿಯಂತ್ರಿಸುತ್ತೇವೆ. ಗಾಳಿಯನ್ನು ನಮಗೆ ಬೇಕೆಂದಾಗ ಸೃಷ್ಟಿಸಿ ಬೇಕಾದ ದಿಕ್ಕಿಗೆ ತಿರುಗಿಸಿ > ವಿಮಾನಗಳನ್ನು ಓಡಿಸುತ್ತೇವೆ. ವಿದ್ಯುತ್ ಶಕ್ತಿಯನ್ನು ಉತ್ಪಾದಿಸುತ್ತೇವೆ, ಯಂತ್ರಗಳನ್ನು > ನಡೆಸುತ್ತೇವೆ. ನಮ್ಮ ಬದುಕಿಗೆ ಅಪಾಯ ತರಬಹುದಾದ ಎಲ್ಲ ಅನಿಷ್ಟಗಳನ್ನೂ ದೂರ ಮಾಡುತ್ತೇವೆ. > ನಮ್ಮ ಎಲ್ಲ ದೈಹಿಕ ದೌರ್ಬಲ್ಯಗಳನ್ನೂ ಮೆಟ್ಟಿ ನಾವು ಅತ್ಯಂತ ಪ್ರಬಲ ಜೀವಿಯಾಗಿದ್ದೇವೆ. > ಅವೆಲ್ಲ ವಿಜ್ಞಾನದ ಮೂಲಕ ನಮಗೆ ಲಭಿಸಿದ ವರದಾನವಾಗಿದೆ. > ಆದರೂ ನಮಗೆ ವಿಜ್ಞಾನವೆಂದರೆ ತೀರ ಅರ್ಥವಾಗದ ವಿದ್ಯೆ, ತೀರ ಕ್ಲಿಷ್ಟ ವಿಷಯ ಎಂಬ ಭಾವನೆ > ಇದೆ. ಅದು ನಮಗೆ ಸಂಬಂಧಿಸಿದ್ದೇ ಅಲ್ಲ ಎಂಬಂತೆ ಅದರಿಂದ ಆದಷ್ಟೂ ದೂರ ಇರಲು > ಯತ್ನಿಸುತ್ತೇವೆ. ಮಕ್ಕಳ ಪಾಠಗಳಲ್ಲಿ ವಿಜ್ಞಾನದ ವಿಷಯ ಬಂದಾಗ ಹೇಗೋ ಚಡಪಡಿಸುತ್ತ, ಅವರು > ಕೇಳುವ ಪ್ರಶ್ನೆಗಳಿಗೆ ಏನೋ ತೋಚಿದ ಉತ್ತರ ಹೇಳಿ ಜಾರಿಕೊಳ್ಳುತ್ತೇವೆ. > ವಿಜ್ಞಾನ ಬೆಳೆದಿದ್ದೇ ಪ್ರಶ್ನೆಗಳನ್ನು ಕೇಳುವುದರಿಂದ. ಹಾಗೂ ಪ್ರಶ್ನೆಗಳಿಗೆ ಸರಿಯಾದ > ಉತ್ತರ ಹುಡುಕುವುದರಿಂದ. > ದೋಸೆಯಲ್ಲಿ ಏಕೆ ತೂತುಗಳಾಗುತ್ತವೆ? ಹುಳಿ ಬಂದ ಮೊಸರಿನಿಂದ ಏಕೆ ಗುಳ್ಳೆಗಳು ಹೊರಕ್ಕೆ > ಬರುತ್ತವೆ? ನಂದಿನಿ ಮೊಸರಿನ ಪ್ಯಾಕೆಟ್ಟು ಯಾಕೆ ಕೆಲವೊಮ್ಮೆ ಉಬ್ಬಿಕೊಳ್ಳುತ್ತದೆ? ಈ > ಪ್ರಶ್ನೆಗಳು ತಲೆಯಲ್ಲಿ ಹೊಕ್ಕರೆ, ಅದಕ್ಕೆ ಉತ್ತರ ಸಿಗುವವರೆಗೆ ಆ ಪ್ರಶ್ನೆ ನಮ್ಮನ್ನು > ಕಾಡುತ್ತಿದ್ದರೆ, ಅದರಿಂದ ವಿಜ್ಞಾನ ಹೊಮ್ಮುತ್ತದೆ. > ಇಂಥ ಸರಳ ಪ್ರಶ್ನೆಗಳ ಹಿಂದೆ ಬಹುದೊಡ್ಡ ವೈಜ್ಞಾನಿಕ ಸತ್ಯಗಳು ಅಡಗಿರುತ್ತವೆ. ಹಿಂದೆ > ಆಗಿಹೋದ ಮಹಾನ್ ವಿಜ್ಞಾನಿಗಳೆಲ್ಲ ಛಲ ಬಿಡದೆ ಇಂಥ ಸರಳ ಪ್ರಶ್ನೆಗಳ ಬೆನ್ನಟ್ಟಿ ಪ್ರಕೃತಿಯ > ಮಹಾನ್ ಸತ್ಯಗಳನ್ನು ಪತ್ತೆ ಹಚ್ಚಿದ್ದಾರೆ. ನಮ್ಮ ಸರ್ ಸಿವಿ ರಾಮನ್ ಅವರು ತಮಗೆ ತಾವೇ > ಕೇಳಿಕೊಂಡ ಸರಳ ಪ್ರಶ್ನೆ ಏನಿತ್ತು ಗೊತ್ತೆ? ‘ಆಕಾಶ ಏಕೆ ನೀಲಿ?’ ನೀಲಿ ಇದೆ ಅನ್ನೋದು > ಎಲ್ಲರಿಗೂ ಗೊತ್ತಿತ್ತು. ಆದರೆ ಅದು ಯಾಕೆ ನೀಲಿ ಇದೆ ಎಂದು ಯಾರೂ ಪ್ರಶ್ನಿಸುವ ಗೋಜಿಗೆ > ಹೋಗಿರಲಿಲ್ಲ. ಕೆಲವರ ತಲೆಯಲ್ಲಿ ಆ ಪ್ರಶ್ನೆ ಹುಟ್ಟಿತ್ತೇನೊ. ಆದರೆ ಛಲಕ್ಕೆ ಬಿದ್ದಂತೆ > ಅದಕ್ಕೆ ಉತ್ತರ ಹುಡುಕಲು ಯತ್ನಿಸಲಿಲ್ಲ. ನಿಸರ್ಗದ ಬಹಳಷ್ಟು ಕ್ರಿಯೆಗಳೆಲ್ಲ ನಮ್ಮಲ್ಲಿ > ಪ್ರಶ್ನೆಗಳನ್ನೇ ಸೃಷ್ಟಿಸುವುದಿಲ್ಲ. ತೆಂಗಿನ ಮರದಿಂದ ಕಾಯಿ ಕೆಳಕ್ಕೆ ಬಿದ್ದರೆ ‘ಯಾಕೆ > ಬಿತ್ತು?’ ಅಂತ ನಾವು ಎಂದೂ ತಲೆ ಕೆಡಿಸಿಕೊಳ್ಳುವುದಿಲ್ಲ. ಐಸಾಕ್ ನ್ಯೂಟನ್ ಅಂಥ ಒಂದು > ಪ್ರಶ್ನೆಯನ್ನು ತನಗೆ ತಾನೇ ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತ ಹೋಗಿದ್ದರಿಂದಲೇ > ಶ್ರೇಷ್ಠ ವಿಜ್ಞಾನಿ ಅನ್ನಿಸಿಕೊಂಡ. > ಪುಟ್ಟ ಮಕ್ಕಳು ಅಂಥ ನೂರಾರು ಪ್ರಶ್ನೆಗಳನ್ನು ಕೇಳುತ್ತಿರುತ್ತವೆ. ಉತ್ತರ ನಮಗೂ > ಸ್ಪಷ್ಟವಾಗಿ ಗೊತ್ತಿರುವುದಿಲ್ಲ ಅಥವಾ ಉತ್ತರಿಸುವ ತಾಳ್ಮೆಯೇ ನಮಗೆ ಇರುವುದಿಲ್ಲ. ಈಗಿನ > ದಿನಗಳಲ್ಲಿ ಬಹಳಷ್ಟು ಪ್ರಶ್ನೆಗಳಿಗೆ ಉತ್ತರಗಳು ಸುಲಭವಾಗಿ ಸಿಗುತ್ತವೆ. ಈಗಂತೂ ನಿಮ್ಮ > ಸ್ಮಾರ್ಟ್ ಫೋನ್ನಲ್ಲೇ ಒಂದೆರಡು ನಿಮಿಷಗಳಲ್ಲಿ ಉತ್ತರಗಳನ್ನು ಪತ್ತೆ ಹಚ್ಚಬಹುದು. ತುಸು > ತಾಳ್ಮೆ ವಹಿಸಿ ಉತ್ತರ ಹುಡುಕಿ ಮಕ್ಕಳ ಕುತೂಹಲ ತಣಿಸಲು ಯತ್ನಿಸಿದರೆ ಮಗುವಿನ ಶೋಧಬುದ್ಧಿಗೆ > ಸಾಣೆ ಹಿಡಿದಂತಾಗುತ್ತದೆ; ಮಿದುಳು ಚುರುಕಾಗುತ್ತದೆ. ತರ್ಕಶಕ್ತಿ ಹೆಚ್ಚುತ್ತದೆ. > ಅಂಗಿ ತೊಟ್ಟ ನಂತರ ನಾವು ಬಟನ್ ಹಾಕುತ್ತೇವೆ. ಅಂದರೆ ವೃತ್ತಾಕಾರದ ಬಟನ್ನನ್ನು ಒಂದು > ಸೀಳುರಂಧ್ರದ ಮೂಲಕ ಅಡ್ಡಡ್ಡ ತೂರಿ ನಂತರ ಅದನ್ನು ಬಟನ್ನಿನ ಮುಖ ತಿರುಗಿಸುತ್ತೇವೆ. ಅಂಗಿ, > ಚಡ್ಡಿ, ಬ್ಲೌಸ್, ಬ್ಯಾಗ್ ಮುಂತಾದವುಗಳ ಎರಡು ಭಾಗವನ್ನು ಜೋಡಿಸುವ ಅತ್ಯಂತ ಸರಳ ವಿಧಾನ > ಅದು. ಆದರೆ ಅದರ ಹಿಂದಿನ ಚಮತ್ಕಾರವನ್ನು ನಾವು ಗಮನಿಸಿದ್ದೇವೆಯೆ? ಮನುಷ್ಯ ಬಟ್ಟೆ ತೊಡಲು > ಆರಂಭಿಸಿ ಐದು ಸಾವಿರ ವರ್ಷಗಳಾದರೂ ಅಂಥ ಉಪಾಯ ಯಾರಿಗೂ ಹೊಳೆದಿರಲಿಲ್ಲ. ನಮ್ಮ ದೇಶದಲ್ಲಂತೂ > 1930ರವರೆಗೂ ಅಂಗಿಗೆ ಅಂಥ ಬಟನ್ ಇರಲೇ ಇಲ್ಲ. ಬಹುಶಃ ಅದೇ ಕಾರಣಕ್ಕೆ ಇರಬೇಕು, ಮಹಿಳೆಯರಿಗೆ > ರವಿಕೆಯೇ ಇರಲಿಲ್ಲ. ಯುರೋಪಿನ ಜನರು ನಮ್ಮಲ್ಲಿಗೆ ಬಂದ ನಂತರವೇ ನಮಗೆ ಬಟನ್ ಪರಿಚಯ ಆದದ್ದು. > ಸಣ್ಣ ಸಣ್ಣ ಸಂಶೋಧನೆಗಳು ಇಡೀ ಮಾನವಕುಲದ ಬದುಕನ್ನೇ ಬದಲಾಯಿಸುತ್ತವೆ ನೋಡಿ. > ಹೊಲಿಗೆ ಯಂತ್ರ ಅಸ್ತಿತ್ವಕ್ಕೆ ಬರಲು ಬಹುಮುಖ್ಯ ಕಾರಣ ಏನು ಗೊತ್ತೆ? ಸೂಜಿಯ ಚೂಪು > ತುದಿಯಲ್ಲೇ ರಂಧ್ರ ಮಾಡಬೇಕು ಎಂಬ ಆಲೋಚನೆ ಈಲಿಯಾಸ್ ಹೋವ್ ಎಂಬಾತನಿಗೆ ಹೊಳೆಯಿತು. > ಅದುವರೆಗೆ ಎಷ್ಟೆಲ್ಲ ಬಗೆಯ ಯಂತ್ರಗಳನ್ನು ತಯಾರಿಸಿ ಎಲ್ಲರೂ ವಿಫಲ ಆಗಿದ್ದರು. ಸೂಜಿಯ ಒಂದು > ಕಣ್ಣಿನ ಮೂಲಕ ಜಗತ್ತೇ ಬದಲಾಯಿತು. > ವೆಲ್ಕ್ರೋ ಝಿಪ್ ಅಂದರೆ ನಮಗೆಲ್ಲ ಗೊತ್ತೇ ಇದೆ. ಚೀಲದ ಬಾಯಿಯನ್ನು, ಬೂಟಿನ ಬೆಲ್ಟನ್ನು, > ಪಾಕೀಟನ್ನು ಪರ್ ಎಂದು ಎಳೆದು ಬಿಚ್ಚುವ ಅಥವಾ ಬಂದ್ ಮಾಡುವ ಸರಳ ಸಾಧನ. ಅದು 1970ರವರೆಗೆ > ಯಾರಿಗೂ ಗೊತ್ತೇ ಇರಲಿಲ್ಲ. > ಜಾರ್ಜ್ ಡಿ ಮೆಸ್ಟ್ರಲ್ ಎಂಬ ಇಲೆಕ್ಟ್ರಾನಿಕ್ ಎಂಜಿನಿಯರ್ ಅಲ್ಲೆಲ್ಲೋ ಸ್ವಿಸ್ ಪರ್ವತ > ಏರುತ್ತಿದ್ದಾಗ ಅವನ ಬಟ್ಟೆಗೆ ಹಾಗೂ ಅವನೊಂದಿಗಿದ್ದ ನಾಯಿಯ ಮೈಗೆಲ್ಲ ಮುಳ್ಳುಮುಳ್ಳಿನ > ಬೀಜಗಳು ಅಂಟಿಕೊಂಡಿದ್ದವು. ಅದು ಹೇಗೆ ಅಂಟಿದೆ ಎಂದು ಸೂಕ್ಷ್ಮವಾಗಿ ನೋಡುತ್ತಿದ್ದಾಗ ಉತ್ತರ > ಹೊಳೆಯಿತು: ಬೀಜದ ಮೇಲಿರುವ ಕೊಕ್ಕೆಯಂಥ ಮುಳ್ಳುಗಳು ಈತನ ಬಟ್ಟೆಯ ನವಿರು ದಾರಕ್ಕೆ > ಸಿಲುಕಿಕೊಳ್ಳುತ್ತಿದ್ದವು. ಈತ ಮನೆಗೆ ಬಂದವನೇ ತಾನೂ ಮಿದು ಪ್ಲಾಸ್ಟಿಕ್ನಿಂದ ಅಂಥದ್ದೇ > ಕೊಕ್ಕೆಗಳನ್ನು ತಯಾರಿಸಿದ. ಬಟ್ಟೆಯ ನೇಯ್ಗೆಗೆ ಅದು ಸಿಲುಕಿಕೊಳ್ಳುವುದನ್ನು ನೋಡಿದ. > ಅಂಥದ್ದೇ ನೇಯ್ಗೆ ಇರುವ ಪ್ಲಾಸ್ಟಿಕ್ ಮತ್ತು ಕೊಕ್ಕೆಗಳನ್ನು ತಯಾರಿಸಿದ. ಇಪ್ಪತ್ತು ವರ್ಷಗಳ > ಸತತ ಪರಿಶ್ರಮದಿಂದ ರೂಪಿಸಿದ ಝಿಪ್ ಸಾಧನ ಇಂದು ಎಲ್ಲೆಡೆ ಬಳಕೆಯಾಗುತ್ತಿದೆ. > ಪ್ರಶ್ನೆ ಕೇಳುವುದರಿಂದಲೂ ವಿಜ್ಞಾನ ಬೆಳೆಯುತ್ತದೆ. ನಿಸರ್ಗದಲ್ಲಿ ವೈಚಿತ್ರ್ಯಗಳನ್ನು > ಸೂಕ್ಷ್ಮವಾಗಿ ಅಧ್ಯಯನ ಮಾಡಿ ಅದನ್ನೇ ಅನುಕರಿಸುವುದರಿಂದಲೂ ವಿಜ್ಞಾನ ತಂತ್ರಜ್ಞಾನ > ವಿಕಾಸವಾಗುತ್ತದೆ. ಹಸುಗಳಿಗೆ ಸಿಡುಬು ಬಂದರೂ ಅದು ಯಾಕೆ ಹಸುಗಳ ಪ್ರಾಣ ತೆಗೆಯುತ್ತಿಲ್ಲ > ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತ ಎಡ್ವರ್ಡ್ ಜೆನ್ನರ್ ಎಂಬಾತ ಸಿಡುಬಿನ ಲಸಿಕೆಯನ್ನು > ಕಂಡು ಹಿಡಿದ. ಅಕ್ಷರಶಃ ಕೋಟಿಗಟ್ಟಲೆ ಜನರ ಪ್ರಾಣ ಉಳಿಸಿದ. ಅದೇ ರೀತಿ ಅಲೆಕ್ಸಾಂಡರ್ > ಫ್ಲೆಮಿಂಗ್ ಎಂಬಾತ ‘ಪೆನಿಸಿಲಿನ್’ ಎಂಬ ಆಂಟಿ ಬಯಾಟಿಕ್ (ಜೀವಿರೋಧಕ ಅಥವಾ ಪ್ರತಿಜೈವಿಕ) > ಔಷಧವನ್ನು ಆಕಸ್ಮಿಕವಾಗಿ ಪತ್ತೆ ಮಾಡಿದ್ದಕ್ಕೂ ಇಂಥದ್ದೇ ರೋಚಕ ಕತೆಯಿದೆ. ಕಣ್ಣಿಗೆ > ಕಂಡದ್ದನ್ನು ಮತ್ತಷ್ಟು ಸೂಕ್ಷ್ಮವಾಗಿ ನೋಡುವ ಕಾಳಜಿ, ಕುತೂಹಲ ಇದ್ದರೆ ಅದೇ ವೈಜ್ಞಾನಿಕ > ಅನ್ವೇಷಣೆ ಎನ್ನಿಸಿಕೊಳ್ಳುತ್ತದೆ. > ಅಂಥ ವೈಜ್ಞಾನಿಕ ಮನೋವೃತ್ತಿಯನ್ನು ನಾವೆಲ್ಲ ಬೆಳೆಸಿಕೊಳ್ಳಬೇಕು ಎಂಬುದನ್ನು > ಪ್ರಚುರಗೊಳಿಸಲೆಂದೇ ಫೆಬ್ರುವರಿ 28ನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನು ಹಬ್ಬದಂತೆ > ಆಚರಿಸಲಾಗುತ್ತದೆ. ಶಾಲೆಗಳಲ್ಲಿ, ವೈಜ್ಞಾನಿಕ ಸಂಘ ಸಂಸ್ಥೆಗಳಲ್ಲಿ ಹಾಗೂ > ಲ್ಯಾಬೊರೇಟರಿಗಳಲ್ಲಿ ಅದ್ದೂರಿಯಾಗಿ ಆಚರಿಸುತ್ತಾರೆ. ತಜ್ಞರು ಭಾಷಣ ಮಾಡುತ್ತಾರೆ; > ಮಕ್ಕಳಿಗೆ ಪ್ರಯೋಗಶಾಲೆಗಳನ್ನು ತೋರಿಸುತ್ತಾರೆ. ದೂರದರ್ಶಕದ ಮೂಲಕ ಗ್ರಹ ತಾರೆಗಳ ವೀಕ್ಷಣೆ > ಮಾಡಿಸುತ್ತಾರೆ. > ಅವೆಲ್ಲ ಸರಿ. ಆದರೆ ಜನಸಾಮಾನ್ಯರು ಮಾತ್ರ ಈ ವಿಜ್ಞಾನ ಹಬ್ಬದಿಂದ ದೂರವೇ ಉಳಿಯುತ್ತಾರೆ. > ಹಾಗೆ ನೋಡಿದರೆ, ಶಾಲೆ ಕಾಲೇಜು, ಪ್ರಯೋಗಶಾಲೆಗಳಿಗಿಂತ ಇಂದು ವೈಜ್ಞಾನಿಕ ಮನೋಭಾವವನ್ನು > ಸಾಮಾನ್ಯ ಜನರಲ್ಲಿ ಬಿತ್ತಬೇಕಾದ ಅಗತ್ಯವಿದೆ. ಏಕೆಂದರೆ ನಾನಾ ಬಗೆಯ ಅವೈಜ್ಞಾನಿಕ > ಮೂಢನಂಬಿಕೆಗಳಿಗೆ ಕಟ್ಟುಬಿದ್ದು ಜನರು ಜೀವನದಲ್ಲಿ ಏನೆಲ್ಲ ಕಷ್ಟನಷ್ಟ > ಅನುಭವಿಸುತ್ತಿರುತ್ತಾರೆ. ಈಗಲೂ ನಿಧಿ ಶೋಧಕ್ಕೆಂದು ನರಬಲಿ ಕೊಡುವ ಮೂಢರ ಬಗ್ಗೆ ನಮ್ಮ > ದೇಶದಲ್ಲಿ ಆಗಾಗ ವರದಿಗಳು ಬರುತ್ತಲೇ ಇರುತ್ತವೆ. ರಸ್ತೆಬದಿಯಲ್ಲಿ ಗಿಣಿಶಾಸ್ತ್ರ ಹೇಳುವ, > ನೋವಿನ ತೈಲ ಮಾರುವ ಢೋಂಗಿಗಳು ಕಂಡುಬರುತ್ತಾರೆ. ರೋಗರುಜಿನೆ ಬಂದಾಗ ಇಲ್ಲವೆ ಹಾವು-ಚೇಳು > ಕಚ್ಚಿದಾಗ ಡಾಕ್ಟರಿಗೆ ತೋರಿಸುವ ಬದಲು ಬಾಬಾಗಳನ್ನೊ, ಮಂತ್ರವಾದಿಗಳನ್ನೊ, ತೀರ್ಥ ಪ್ರಸಾದ, > ಹರಕೆಗಳನ್ನೊ ನಂಬಿ ಮೋಸ ಹೋಗುತ್ತಿರುತ್ತಾರೆ. ವಿಜ್ಞಾನದ ದೃಷ್ಟಿಯಿಂದ ಸತ್ಯದೂರವಾದ ಬೂದಿ, > ತಾಯತ, ಹರಳು, ಉಂಗುರ, ತೈಲ, ರುದ್ರಾಕ್ಷಿ, ವಾಸ್ತು, ರಾಹು, ಕೇತು ಮುಂತಾದ ನಾನಾ ಬಗೆಯ > ಮಂಕುಬೂದಿಗಳಿಗೆ ಮುಗ್ಧರು ಬಲಿಪಶುವಾಗುತ್ತಾರೆ. > ಅಂಥವರಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ಬೆಳೆಸುವ ನಿಟ್ಟಿನಲ್ಲಿ > ‘ರಾಷ್ಟ್ರೀಯ ವಿಜ್ಞಾನ ದಿನ’ದ ಆದ್ಯತೆ ಬದಲಾಗಬೇಕು. ನಾವೆಲ್ಲರೂ ಏನು ವಿಜ್ಞಾನಿಗಳೇ > ಆಗಬೇಕೆಂದಿಲ್ಲ. ಯಾವುದು ವೈಜ್ಞಾನಿಕ ಯಾವುದು ಅವೈಜ್ಞಾನಿಕ ಆಚರಣೆ ಎಂಬುದನ್ನು > ಪ್ರತ್ಯೇಕಿಸಿ ನೋಡುವ ಸಾಮಥ್ರ್ಯ ಬಂದರೆ ಅದೇ ಸಾಕು. ಈ 21ನೇ ಶತಮಾನದಲ್ಲೂ 18ನೇ ಶತಮಾನದ > ಮೂಢನಂಬಿಕೆಗಳಿಗೆ, ರೂಢ ನಂಬಿಕೆಗಳಿಗೆ ಜೋತು ಬಿದ್ದ ಕೋಟ್ಯಂತರ ಜನರು ನಮ್ಮಲ್ಲಿದ್ದಾರೆ. > ಅಂಥವರನ್ನು ವಿಚಾರವಂತರನ್ನಾಗಿಸುವ ಕೆಲಸಕ್ಕೆ ಈ ‘ಹಬ್ಬ’ದ ದಿನವೇ ಚಾಲನೆ ಸಿಗುವಂತಾಗಬೇಕು. > ಇಲ್ಲಾಂದರೆ ವಾಸ್ತವ ಏನೆಂದು ಗೊತ್ತಲ್ಲ, ಎರಡನೆಯ ನೊಬೆಲ್ಗೇ ನಮ್ಮಲ್ಲಿ ತತ್ವಾರ ಇದೆ. > ಸರ್ ಸಿವಿ ರಾಮನ್ನರಿಗೆ ನಮ್ಮ ದೇಶದ ಮೊದಲ ವಿಜ್ಞಾನ ನೊಬೆಲ್ ಸಿಕ್ಕಿತು ನಿಜ. ಆದರೆ ಅವರ > ನಂತರ ಭಾರತದಲ್ಲಿ ಸಂಶೋಧನೆ ಮಾಡಿದ ಯಾವ ಭಾರತೀಯ ವಿಜ್ಞಾನಿಗೂ ಇನ್ನೊಂದು ನೊಬೆಲ್ ಇದುವರೆಗೆ > ಸಿಗಲಿಲ್ಲ > > > <http://www.blogger.com/blog_this.pyra?t&u=http%3A%2F%2Fkanaja.in%2Farchives%2F127928&n=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95+%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF&pli=1> > <http://delicious.com/post?url=http%3A%2F%2Fkanaja.in%2Farchives%2F127928&title=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95+%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF> > <http://digg.com/submit?url=http%3A%2F%2Fkanaja.in%2Farchives%2F127928&title=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95+%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF&bodytext=%E0%B2%AA%E0%B3%8D%E0%B2%B0%E0%B2%A4%E0%B2%BF+%E0%B2%B5%E0%B2%B0%E0%B3%8D%E0%B2%B7+%E0%B2%AB%E0%B3%86%E0%B2%AC%E0%B3%8D%E0%B2%B0%E0%B3%81%E0%B2%B5%E0%B2%B0%E0%B2%BF+28%E0%B2%B0%E0%B2%82%E0%B2%A6%E0%B3%81+%E0%B2%A8%E0%B2%BE%E0%B2%B5%E0%B3%81+%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%E0%B2%B0%E0%B3%81+%E2%80%98%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8%E2%80%99%E0%B2%B5%E0%B2%A8%E0%B3%8D%E0%B2%A8%E0%B3%81+%E0%B2%86%E0%B2%9A%E0%B2%B0%E0%B2%BF%E0%B2%B8%E0%B3%81%E0%B2%A4%E0%B3%8D%E0%B2%A4%E0%B3%87%E0%B2%B5%E0%B3%86.+%E0%B2%8F%E0%B2%95%E0%B3%86%E0%B2%82%E0%B2%A6%E0%B2%B0%E0%B3%86+%E0%B2%AB%E0%B3%86%E0%B2%AC%E0%B3%8D%E0%B2%B0%E0%B3%81%E0%B2%B5%E0%B2%B0%E0%B2%BF+28+%E0%B2%85%E0%B2%A8%E0%B3%8D%E0%B2%A8%E0%B3%8B%E0%B2%A6%E0%B3%81+%E2%80%98%E0%B2%B0%E0%B2%BE%E0%B2%AE%E0%B2%A8%E0%B3%8D+%E0%B2%8E%E0%B2%AB%E0%B3%86%E0%B2%95%E0%B3%8D%E0%B2%9F%E0%B3%8D%27+%E0%B2> > <http://www.facebook.com/sharer.php?u=http%3A%2F%2Fkanaja.in%2Farchives%2F127928&t=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95+%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF> > <http://www.reddit.com/submit?url=http%3A%2F%2Fkanaja.in%2Farchives%2F127928&title=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95+%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF> > <http://www.stumbleupon.com/submit?url=http%3A%2F%2Fkanaja.in%2Farchives%2F127928&title=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%A6%E0%B2%BF%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95+%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF> > <http://twitter.com/home/?status=http%3A%2F%2Fkanaja.in%2Farchives%2F127928> > <?subject=%E0%B2%95%E0%B2%A3%E0%B2%9C%20:%20%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8%20%E0%B2%A6%E0%B2%BF%E0%B2%A8%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%B5%E0%B3%88%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%95%20%E0%B2%AE%E0%B2%A8%E0%B3%8B%E0%B2%B5%E0%B3%83%E0%B2%A4%E0%B3%8D%E0%B2%A4%E0%B2%BF&body=here%20is%20a%20link%20to%20a%20site%20I%20really%20like.%20%20%20https://kanaja.in/archives/127928> > > *ಲೇಖಕರು:* ನಾಗೇಶ ಹೆಗಡೆ > <http://kanaja.in/archives/author/%e0%b2%a8%e0%b2%be%e0%b2%97%e0%b3%87%e0%b2%b6-%e0%b2%b9%e0%b3%86%e0%b2%97%e0%b2%a1%e0%b3%86> > > Hareeshkumar K > AM(PCM) > GHS HUSKURU > MALAVALLI TQ > MANDYA DT 571475 > mobile no 9880328224 > email harihusk...@gmail.com > > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > Visit this group at https://groups.google.com/group/mathssciencestf. > For more options, visit https://groups.google.com/d/optout. > -- Maya.s lecturer, DIET,udupi. -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.