ಮೇಡಂ,ಶುಭಕಾಮನೆಗಳು. On 27 Mar 2017 11:02 p.m., "Lakshmikandghal11" <lakshmikandgha...@gmail.com> wrote:
> [10:57pm, 27/03/2017] lakshmi kandgal: samgra vachan samputa pustaka idre > hakri > [10:57pm, 27/03/2017] lakshmi kandgal: devar dasimayyna jeevana &sahitya > .book idre hakri > > > Sent from Samsung Mobile > > > VIJAYALAKSHMI S <harshitdh2...@gmail.com> wrote: > > > Yugadi visheshathe thilisid ninage dhanyavadagalu > > On 27-Mar-2017 10:57 AM, "Sameera samee" <mehak.sa...@gmail.com> wrote: > > *ಹಿಂದೂಗಳ ಹೊಸ ವರ್ಷಾರಂಭ – ಯುಗಾದಿ* > > > > ಯಾವುದೇ ಕೃತಿಯನ್ನು ಮಾಡುವ ಮೊದಲು ಅದನ್ನು ಏಕೆ ಮಾಡಬೇಕು? ಅದರ ಹಿಂದಿನ ಶಾಸ್ತ್ರ, > ಇತಿಹಾಸ ಏನು ಎಂದು ನಾವು ನೋಡುತ್ತೇವೆ. ಹಾಗಿದ್ದರೆ ಈಗ ಎಲ್ಲರೂ ಡಿಸೆಂಬರ್ ೩೧ ರಂದು ಯಾಕೆ > ಹೊಸ ವರ್ಷ ಆಚರಿಸುತ್ತಾರೆ? ಇದರ ಹಿಂದಿನ ಶಾಸ್ತ್ರ ಅಥವಾ ಇತಿಹಾಸವೇನು ಎಂದು ನಿಮಗೆ > ಅನಿಸಿಲ್ಲವೇ? ಸರಿಯಾದ ಕಾರಣಗಳಿಲ್ಲದಿದ್ದರೂ ನಾವು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಾ > ಡಿಸೆಂಬರ್ ೩೧ ರಂದು ಹೊಸವರ್ಷ ಎಂದು ಆಚರಿಸುತ್ತೇವೆ. ರಾತ್ರಿ ೧೨ ಗಂಟೆಗೆ ಡಿಸ್ಕೋ, > ಪಬ್ಬುಗಳ ಕರ್ಕಶ ಸದ್ದು, ಕುಡಿದು ಕುಣಿಯುವ ಹುಡುಗರೊಂದಿಗೆ ಹೊಸವರ್ಷವನ್ನು ಆಚರಿಸುವುದು > ನಿಮಗೆ ಸರಿ ಅನಿಸುತ್ತದೆಯೇ? ಅದನ್ನು ನೋಡಿ ನಿಜವಾಗಲೂ ಹೊಸವರ್ಷವೆಂದು ನಮಗೆ > ಅನಿಸುತ್ತದೆಯೇ? ನೀವೇ ಇದರ ಕುರಿತು ವಿಚಾರ ಮಾಡಿ. ನಮ್ಮ ದಿನದ ಆರಂಭವು ಕತ್ತಲು, ದುಃಖದಿಂದ > ಆಗಬೇಕೆಂದು ನಿಮಗೆ ಅನಿಸುತ್ತದೆಯೇ? ಹಿಂದೂ ಸಂಸ್ಕೃತಿಯನುಸಾರ ದಿನದ ಆರಂಭವು ಬೆಳಗ್ಗೆ > ಸೂರ್ಯೋದಯದೊಂದಿಗೆ ಆಗುತ್ತದೆ. > > ನಮ್ಮ ಹಿಂದೂ ಸಂಸ್ಕೃತಿಯನುಸಾರ ನಾವು ಯುಗಾದಿಯಂದು ಏಕೆ ಹೊಸವರ್ಷ ಆಚರಿಸುತ್ತೇವೆ ಎಂದು > ನಿಮಗೆ ತಿಳಿದಿದೆಯೇ? > > ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು > > ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ > ಪ್ರತಿಪದೆ. ’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ > ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ > ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ > ಕಾರಣಗಳಿವೆ. > > ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ – ಸಂಪಾತದ ಮೇಲೆ > ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) > ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ > ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿ ವಸಂತ ಋತುವು ನನ್ನ > ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ > ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ > ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ > ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ > ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ > ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ತದ್ವಿರುದ್ಧವಾಗಿ > ಡಿಸೆಂಬರ್ ೩೧ ರಂದು ರಾತ್ರಿ ೧೨ ಗಂಟೆಗೆ ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ > ಲಯಕಾಲಕ್ಕೆ ಸಂಬಂಧಿಸಿದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು > ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು. > > ನಿಸರ್ಗದ ನಿಯಮವನ್ನು ಅನುಸರಿಸಿ ಮಾಡಿದ ವಿಷಯಗಳು ಮನುಷ್ಯರಿಗೆ ಪೂರಕವಾಗಿರುತ್ತವೆ ಮತ್ತು > ಅದಕ್ಕೆ ವಿರುದ್ಧವಾಗಿ ಮಾಡಿರುವ ವಿಷಯಗಳು ಮನುಷ್ಯರಿಗೆ ಹಾನಿಕಾರಿಯಾಗಿರುತ್ತವೆ. ಆದುದರಿಂದ > ಪಾಶ್ಚಾತ್ಯ ಸಂಸ್ಕೃತಿಗನುಸಾರ ಜನವರಿ ಒಂದರಂದು ಹೊಸವರ್ಷಾರಂಭವನ್ನು ಮಾಡದೇ, ಯುಗಾದಿ > ಪಾಡ್ಯದಂದೇ ಹೊಸವರ್ಷವನ್ನು ಆಚರಿಸುವುದರಲ್ಲಿ ನಮ್ಮ ನಿಜವಾದ ಹಿತವಿದೆ. > > ಐತಿಹಾಸಿಕ ಕಾರಣಗಳು: ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು > ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ > ‘ಶಾಲಿವಾಹನ ಶಕೆ’ ಪ್ರಾರಂಭವಾಯಿತು, ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ > ವಿಜಯವನ್ನು ಪಡೆದನು. > > ಆಧ್ಯಾತ್ಮಿಕ ಕಾರಣಗಳು : ಬ್ರಹ್ಮದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದನು. > ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು > ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ > ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ > ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ > ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ. > > ಯುಗಾದಿ ಪಾಡ್ಯದಂದು ಮಾಡಬೇಕಾದ ಧಾರ್ಮಿಕ ಕೃತಿಗಳು > > ಯಾವುದೇ ಹಬ್ಬ ಬಂದರೆ ಆ ಹಬ್ಬದ ವೈಶಿಷ್ಟ್ಯದಂತೆ ಮತ್ತು ನಮ್ಮ ಪದ್ಧತಿಯಂತೆ ನಾವು ಏನಾದರೂ > ಮಾಡುತ್ತಿರುತ್ತೇವೆ, ಆದರೆ ಧರ್ಮದಲ್ಲಿ ಹೇಳಿದಂತಹ ಇಂತಹ ಪಾರಂಪರಿಕ ಕೃತಿಯ ಹಿಂದಿನ > ಅಧ್ಯಾತ್ಮಶಾಸ್ತ್ರವನ್ನು ಗಮನದಲ್ಲಿಟ್ಟುಕೊಂಡರೆ ಅದರ ಮಹತ್ವವು ನಮಗೆ ಹಿಡಿಸುತ್ತದೆ. ಇಲ್ಲಿ > ನಾವು ಯುಗಾದಿಯಂದು ಮಾಡಬೇಕಾದ ಧಾರ್ಮಿಕ ಕೃತಿಗಳ ಮಾಹಿತಿಯನ್ನು ಪಡೆಯೋಣ. > > ಅಭ್ಯಂಗಸ್ನಾನ > ಯುಗಾದಿ ಪಾಡ್ಯದ ದಿನ ಬೆಳಗ್ಗೆ ಬೇಗನೆ ಎದ್ದು ಮೊದಲು ಅಭ್ಯಂಗಸ್ನಾನ ಮಾಡಬೇಕು. > ಅಭ್ಯಂಗಸ್ನಾನವನ್ನು ಮಾಡುವಾಗ ‘ದೇಶಕಾಲಕಥನ’ ಮಾಡಬೇಕು.‘ ದೇಶಕಾಲಕಥನ’ ದಿಂದ ಅಹಂ > ಕಡಿಮೆಯಾಗಲು ಸಹಾಯವಾಗುತ್ತದೆ. > > ತೋರಣವನ್ನು ಕಟ್ಟುವುದು > ಸ್ನಾನದ ಬಳಿಕ ಮಾವಿನ ಎಲೆಯ ತೋರಣವನ್ನು ತಯಾರಿಸಿ ಕೆಂಪು ಹೂವುಗಳೊಂದಿಗೆ ಎಲ್ಲ > ಬಾಗಿಲುಗಳಿಗೆ ಕಟ್ಟಬೇಕು. ಏಕೆಂದರೆ ಕೆಂಪು ಬಣ್ಣ ಶುಭಸೂಚಕವಾಗಿದೆ. ಸಾತ್ತ್ವಿಕ ತೋರಣದಿಂದ > ಚೈತನ್ಯ ಪ್ರಕ್ಷೇಪಿತವಾಗಿ ಸಂರಕ್ಷಣಾಕವಚ ನಿರ್ಮಾಣವಾಗುತ್ತದೆ. > > ಪೂಜೆ > ಮೊದಲು ನಿತ್ಯಕರ್ಮ ದೇವರ ಪೂಜೆಯನ್ನು ಮಾಡಬೇಕು. ‘ವರ್ಷದ ಪಾಡ್ಯದಂದು ಮಹಾಶಾಂತಿ ಮಾಡಬೇಕು. > ಶಾಂತಿಯ ಪ್ರಾರಂಭದಲ್ಲಿ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು, ಏಕೆಂದರೆ ಬ್ರಹ್ಮದೇವನು > ವಿಶ್ವವನ್ನು ಈ ದಿನವೇ ನಿರ್ಮಿಸಿದನು. ಪೂಜೆಯಲ್ಲಿ ಅವನಿಗೆ ದವನವನ್ನು (ಸುವಾಸನೆಯ > ಎಲೆಗಳನ್ನು) ಅರ್ಪಿಸಬೇಕು. ಅನಂತರ ಹೋಮಹವನ ಮತ್ತು ಬ್ರಾಹ್ಮಣಸಂತರ್ಪಣೆ ಮಾಡಬೇಕು. ತರುವಾಯ > ಅನಂತ ರೂಪಗಳಲ್ಲಿ ಅವತರಿಸುವ ಶ್ರೀವಿಷ್ಣುವಿನ ಪೂಜೆಯನ್ನು ಮಾಡಬೇಕು. ‘ನಮಸ್ತೆ ಬಹುರೂಪಾಯ > ವಿಷ್ಣವೇ ನಮಃ|’ ಎನ್ನುವ ಮಂತ್ರವನ್ನು ಹೇಳಿ ಅವನಿಗೆ ನಮಸ್ಕರಿಸಬೇಕು. ಅನಂತರ > ಬ್ರಾಹ್ಮಣರಿಗೆ ದಕ್ಷಿಣೆಯನ್ನು ನೀಡಬೇಕು, ಸಾಧ್ಯವಾದರೆ ಇತಿಹಾಸ, ಪುರಾಣ ಮುಂತಾದ > ಗ್ರಂಥಗಳನ್ನು ಬ್ರಾಹ್ಮಣರಿಗೆ ದಾನವೆಂದು ನೀಡಬೇಕು. ಈ ಶಾಂತಿಯನ್ನು ಮಾಡುವುದರಿಂದ ಎಲ್ಲ > ಪಾಪಗಳು ನಾಶವಾಗುತ್ತವೆ, ಸಂಕಟಗಳು ಬರುವುದಿಲ್ಲ,ಆಯುಷ್ಯವೃದ್ಧಿಯಾಗುತ್ತದೆ ಮತ್ತು > ಧನಧಾನ್ಯಗಳ ಸಮೃದ್ಧಿಯಾಗುತ್ತದೆ.’ ಈ ದಿನ ಯಾವ ವಾರವಿರುತ್ತದೆಯೋ, ಆ ವಾರದೇವತೆಯ > ಪೂಜೆಯನ್ನೂ ಮಾಡಬೇಕು. > > ಬ್ರಹ್ಮಧ್ವಜವನ್ನು ಏರಿಸುವುದು > ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ > ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು > ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ. > ಅದರ ಮುಂದೆ ಸುಂದರವಾದ ರಂಗೋಲಿ ಹಾಕುತ್ತಾರೆ. ಇದಕ್ಕೆ ‘ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ > ಸಂಕಲ್ಪಪೂರ್ವಕವಾಗಿ ಪೂಜೆ ಮಾಡಬೇಕು. ಎರಡನೆಯ ದಿನದಿಂದ ಈ ಕಲಶವನ್ನು ನೀರು ಕುಡಿಯಲು > ಉಪಯೋಗಿಸಬೇಕು, ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು > ಕೆಳಗಿಳಿಸುತ್ತಾರೆ. > > ಧರ್ಮಧ್ವಜವನ್ನು ನಿಲ್ಲಿಸುವ ಪದ್ಧತಿ > >  > > ೧. ಧರ್ಮಧ್ವಜದ ಸ್ಥಾನ : ಧರ್ಮಧ್ವಜವನ್ನು ಬಾಗಿಲ ಹೊರಗೆ; ಅದರೆ ಹೊಸ್ತಿಲಿನ ಹತ್ತಿರ > (ಮನೆಯೊಳಗಿಂದ ನೋಡಿದರೆ) ಬಲಗಡೆಯಲ್ಲಿ ನಿಲ್ಲಿಸಬೇಕು. > > ೨. ಪದ್ಧತಿ : > > ಅ. ಧರ್ಮಧ್ವಜವನ್ನು ನಿಲ್ಲಿಸುವಾಗ ಎಲ್ಲಕ್ಕಿಂತ ಮೊದಲು ಸೆಗಣಿಯಿಂದ ನೆಲಸಾರಿಸಿ > ಅಂಗಳವನ್ನು ರಂಗೋಲಿಯಿಂದ ಸುಶೋಭಿತಗೊಳಿಸಬೇಕು. ಧರ್ಮಧ್ವಜವನ್ನು ನಿಲ್ಲಿಸುವ ಜಾಗದಲ್ಲಿ > ರಂಗೋಲಿಯಿಂದ ಸ್ವಸ್ತಿಕವನ್ನು ಬಿಡಿಸಿ ಅದರ ಮಧ್ಯಬಿಂದುವಿನಲ್ಲಿ ಅರಿಷಿಣ ಕುಂಕುಮವನ್ನು > ಹಾಕಬೇಕು. > ಆ. ಧರ್ಮಧ್ವಜವನ್ನು ನಿಲ್ಲಿಸುವಾಗ ಬ್ರಹ್ಮಾಂಡದಲ್ಲಿನ ಶಿವ ಶಕ್ತಿಯ ಲಹರಿಗಳ ಆವಾಹನ ಮಾಡಿ > ಅವುಗಳನ್ನು ಸ್ವಸ್ತಿಕದ ಮೇಲೆ ಸ್ಥಾಪಿಸಬೇಕು. ಇದರಿಂದ ಧರ್ಮಧ್ವಜದ ತುದಿಯಲ್ಲಿ ಇರುವ ಎಲ್ಲ > ಘಟಕಗಳಿಗೆ ದೇವತ್ವವು ಪ್ರಾಪ್ತವಾಗುತ್ತದೆ. > ಇ. ಧರ್ಮಧ್ವಜವನ್ನು ನೆಲದ ಮೇಲೆ ಹೊಸ್ತಿಲಿನ ಹತ್ತಿರ; ಆದರೆ ಸ್ವಲ್ಪ ಬಾಗಿದ ಸ್ಥಿತಿಯಲ್ಲಿ > ನಿಲ್ಲಿಸಬೇಕು. > > ಪಂಚಾಂಗ ಶ್ರವಣ ಎಂದರೇನು ಮತ್ತು ಅದರ ಮಹತ್ವ ಏನು? > > ಜ್ಯೋತಿಷಿಯ ಪೂಜೆಯನ್ನು ಮಾಡಿ ಅವರಿಂದ ಅಥವಾ ಉಪಾಧ್ಯಾಯರಿಂದ ಹೊಸ ವರ್ಷದ ಪಂಚಾಂಗವನ್ನು > ಅರ್ಥಾತ್ ವರ್ಷಫಲದ ಶ್ರವಣವನ್ನು ಮಾಡಬೇಕು. ಈ ವರ್ಷಫಲದ ಶ್ರವಣದ ಫಲ ಹೇಳಲಾಗಿದೆ, ಅದು > ಮುಂದಿನಂತಿದೆ. ತಿಥಿಯ ಶ್ರವಣದಿಂದ ಲಕ್ಷ್ಮೀಯು ಲಭಿಸುತ್ತಾಳೆ, ವಾರದ ಶ್ರವಣದಿಂದ ಆಯುಷ್ಯವು > ವೃದ್ಧಿಯಾಗುತ್ತದೆ, ನಕ್ಷತ್ರಶ್ರವಣದಿಂದ ಪಾಪನಾಶ ವಾಗುತ್ತದೆ, ಯೋಗಶ್ರವಣದಿಂದ ರೋಗಗಳ > ನಿವಾರಣೆಯಾಗುತ್ತದೆ, ಕರಣ ಶ್ರವಣದಿಂದ ಇಚ್ಛಿತ ಕಾರ್ಯವು ಸಾಧ್ಯವಾಗುತ್ತದೆ. ಇವು ಪಂಚಾಂಗ > ಶ್ರವಣದ ಉತ್ತಮ ಫಲಗಳಾಗಿವೆ. ಇದರ ನಿತ್ಯಶ್ರವಣದಿಂದ ಗಂಗಾಸ್ನಾನದ ಫಲವು ಲಭಿಸುತ್ತದೆ.’ > > ಬೇವಿನ ಪ್ರಸಾದ > ಪಂಚಾಂಗಶ್ರವಣದ ನಂತರ ಕಹಿ ಬೇವಿನ ಪ್ರಸಾದ ಹಂಚಬೇಕು. ಈ ಪ್ರಸಾದವನ್ನು ಬೇವಿನ > ಹೂವು,ಚಿಗುರೆಲೆಗಳು, ನೆನೆಸಿದ ಕಡಲೆಕಾಳು ಅಥವಾ ಬೇಳೆ, ಜೇನು, ಜೀರಿಗೆ ಮತ್ತು ಸ್ವಲ್ಪ > ಇಂಗು ಇವೆಲ್ಲವನ್ನು ಬೆರೆಸಿ ತಯಾರಿಸುತ್ತಾರೆ. > > ಭೂಮಿಯನ್ನು ಊಳುವುದು > ಯುಗಾದಿಯಂದು ಭೂಮಿಯನ್ನು ಊಳಬೇಕು. ಭೂಮಿಯನ್ನು ಊಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. > ಮಣ್ಣಿನ ಸೂಕ್ಷ್ಮ-ಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜ ಮೊಳಕೆಯೊಡೆಯುವ ಭೂಮಿಯ > ಸಾಮರ್ಥ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ. ಭೂಮಿಗೆ ಉಪಯೋಗಿಸಲ್ಪಡುವ ಸಲಕರಣೆ ಮತ್ತು > ಎತ್ತುಗಳ ಮೇಲೆ ಪ್ರಜಾಪತಿ ಲಹರಿಗಳನ್ನು ಉತ್ಪನ್ನ ಮಾಡುವ ಮಂತ್ರಸಹಿತ ಅಕ್ಷತೆಗಳನ್ನು > ಹಾಕಬೇಕು. ಹೊಲದಲ್ಲಿ (ಗದ್ದೆಯಲ್ಲಿ) ಕೆಲಸ ಮಾಡುವವರಿಗೆ ಹೊಸ ಬಟ್ಟೆಗಳನ್ನು ಕೊಡಬೇಕು. ಈ > ದಿನ ಹೊಲದಲ್ಲಿ ಕೆಲಸ ಮಾಡುವ ಜನರ ಮತ್ತು ಎತ್ತುಗಳ ಭೋಜನದಲ್ಲಿ ಕುಂಬಳಕಾಯಿ, ಹೆಸರುಬೇಳೆ, > ಅಕ್ಕಿ, ಹೂರಣ ಮುಂತಾದ ಪದಾರ್ಥಗಳಿರಬೇಕು. > > ದಾನ > ಯಾಚಕರಿಗೆ ಅನೇಕ ವಿಧದ ದಾನವನ್ನು ಕೊಡಬೇಕು, ಉದಾ. ಅರವಟ್ಟಿಗೆಯನ್ನು (ಜಲ ಮಂದಿರ) > ನಿರ್ಮಿಸಿ ನೀರಿನ ದಾನವನ್ನು ಮಾಡಬೇಕು. ಇದರಿಂದ ಪಿತೃಗಳು ಸಂತುಷ್ಟರಾಗುತ್ತಾರೆ. > > ಈ ದಿನ ಅನೇಕ ವಿಧದ ಮಂಗಲ ಹಾಡುಗಳನ್ನು ಮತ್ತು ಪುಣ್ಯಪುರುಷರ ಕಥೆಗಳನ್ನು ಕೇಳುತ್ತಾ ಈ > ದಿನವನ್ನು ಆನಂದದಿಂದ ಕಳೆಯಬೇಕು. ಈಗಿನ ಕಾಲದ ಹಬ್ಬವೆಂದರೆ ಮೋಜು ಮಜಾ ಮಾಡುವ ದಿನವೆಂಬ > ಸಂಕಲ್ಪನೆ ಬರುವಂತಾಗಿದೆ, ಆದರೆ ಹಿಂದೂ ಧರ್ಮದ ಶಾಸ್ತ್ರೀಯ ಪದ್ಧತಿಯ ಹಬ್ಬವೆಂದರೆ > ‘ಹೆಚ್ಚೆಚ್ಚು ಚೈತನ್ಯ ಪಡೆಯುವ ದಿನ’ವಾಗಿರುತ್ತದೆ. ಆದ್ದರಿಂದ ಹಬ್ಬದಂದು ಸಾತ್ತ್ವಿಕ > ಆಹಾರ, ಸಾತ್ತ್ವಿಕ ಬಟ್ಟೆ ಹಾಗೂ ಇತರ ಧಾರ್ಮಿಕ ಕೃತಿ ಇತ್ಯಾದಿಗಳನ್ನು ಮಾಡುವುದರೊಂದಿಗೆ > ಸಾತ್ತ್ವಿಕವಾದ ಸುಖದಾಯಕ ಕೃತಿಗಳನ್ನು ಮಾಡಲು ಶಾಸ್ತ್ರವು ಹೇಳಿದೆ. ಈ ರೀತಿ ಯುಗಾದಿಯನ್ನು > ಆಚರಿಸುವುದರಿಂದ ಆರೋಗ್ಯ, ಕೃಷಿ ಮುಂತಾದವು ಹೆಚ್ಚಾಗುತ್ತದೆ. > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8Yx > geXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರ > ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/Public_ > Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.